Home ಬೆಳಗಾವಿವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ ..!ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿಧೇಯಕ ಮಂಡನೆ- ನ್ಯಾಯಕ್ಕೆ ಸಂದ ಜಯ – ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಪಿ.ಗಿರೀಶ್..!

ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ ..!ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿಧೇಯಕ ಮಂಡನೆ- ನ್ಯಾಯಕ್ಕೆ ಸಂದ ಜಯ – ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಪಿ.ಗಿರೀಶ್..!

by EDITOR NEWS WARRIORS
0 comments

ಸರ್ಕಾರಿ ಉದ್ಯೋಗಕ್ಕೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ, 10 ಕೋಟಿ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ವಿಧೇಯಕವನ್ನು ನಿನ್ನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಮಂಡಿಸಿದೆ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರವಾಗಿ ಸಚಿವರಾ ದ ಪ್ರಿಯಾಂಕ ಖರ್ಗೆ ಅವರು, ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕ-2023 ಅನ್ನು ಮಂಡಿಸಿದರು. ಪರೀಕ್ಷಾ ಅಕ್ರಮ ನಡೆಸಿದವರ ಸ್ವತ್ತು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹ ಅಪರಾಧಗಳ ವಿಚಾರಣೆಗಾಗಿ ನ್ಯಾಯಾಲಯಗಳನ್ನು ಸ್ಥಾಪಿಸಲು ವಿಧೇಯಕ ಅವಕಾಶ ಕಲ್ಪಿಸಲಿದೆ.

ಸ್ವಾಯತ್ತ ಸಂಸ್ಥೆಗಳು, ಪ್ರಾಧಿಕಾರಗಳು, ಮಂಡಳಿಗಳು ಅಥವಾ ನಿಗಮ ಒಳಗೊಂಡಂತೆ ರಾಜ್ಯ ಸರ್ಕಾರದ ಯಾವುದೇ ಹುದ್ದೆಗೆ ನೇಮಕಾತಿ ಉದ್ದೇಶಕ್ಕಾಗಿ ನಡೆಸಲಾಗುವ ಪಬ್ಲಿಕ್ ಪರೀಕ್ಷೆಗಳಲ್ಲಿ ಅನುಚಿತ ವಿಧಾನ ಬಳಸುವುದನ್ನು ಪ್ರತಿಬಂಧಿಸಲು ಮತ್ತು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಯಾವುದೇ ವ್ಯಕ್ತಿಯು ಅನುಚಿತ ವಿಧಾನದಲ್ಲಿ ತೊಡಗಿದರೆ ಆ ವ್ಯಕ್ತಿಗೆ 5 ವರ್ಷ ಹಾಗೂ ವಿಸ್ತರಿಸಬಹುದಾದ ಜೈಲು ಶಿಕ್ಷೆ ವಿಧಿಸಬಹುದು. ಪರೀಕ್ಷೆಯಲ್ಲಿ ಒಳಸಂಚು ಹಾಗೂ ನಿಯಮ ಉಲ್ಲಂಘಿಸಿದವರಿಗೆ 8 ವರ್ಷದಿಂದ 12 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ 15 ಲಕ್ಷ ರೂ.ನಿಂದ 15 ಕೋಟಿ ರೂ.ವರೆಗೆ ದಂಡ ವಿಧಿಸಬಹುದು. ಇನ್ನು ಅಕ್ರಮ ಸಾಬೀತಾದರೆ ಆರೋಪಿಯಿಂದಲೇ ಪರೀಕ್ಷೆಗೆ ಸಂಬಂಧಪಟ್ಟ ಎಲ್ಲ ಖರ್ಚು ಮತ್ತು ವೆಚ್ಚ ಭರಿಸಲು ಅವಕಾಶ ಕಲ್ಪಿಸಲಾಗಿದೆ.

ಕೆಪಿಎಸ್‌ಸಿ, ಕೆಇಎ, ಪ್ರಾಧಿಕಾರ ಹಾಗೂ ನೇಮಕಾತಿ ಸಮಿತಿಯ ಮೂಲಕ ನಡೆಸುವ ಪರೀಕ್ಷೆ, ವಿಶ್ವವಿದ್ಯಾಲಯ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಪಾಲ್ಗೊಂಡ ಯಾವುದೇ ಪ್ರಭಾವಿತ ವ್ಯಕ್ತಿಯಾದರೂ ಆತನಿಗೆ ಕಾನೂನಿನ ಮುಖಾಂತರ ಶಿಕ್ಷಿಸಲು ಒಂದು ಉತ್ತಮವಾದ ವಿಧೇಯಕವನ್ನು ಸರ್ಕಾರ ಮಂಡಿಸುವ ಮುಖಾಂತರ ಪ್ರತಿಭಾವಂತ ಲಕ್ಷಾಂತರ ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯವನ್ನು ಕೊಡಿಸುವಂತಹ ಕೆಲಸವನ್ನು ಮಾಡಿ ನುಡಿದಂತೆ ನಡೆದ ಸರ್ಕಾರವಾಗಿದೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್ ಪಿ ಗಿರೀಶ್ ಹರ್ಷ ವ್ಯಕ್ತಪಡಿಸಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...