Home ರಾಜ್ಯBreaking news: ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ..!

Breaking news: ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ..!

by EDITOR NEWS WARRIORS
0 comments

ಬಹುದಿನಗಳ ಬೇಡಿಕೆಯಾಗಿದ್ದ ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಕಾಯ್ದೆಯನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ.

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ ಪಡೆದುಕೊಂಡಿದೆ.


ಕಾಯ್ದೆಯ ಪ್ರಮುಖ ಅಂಶಗಳು.

1)ಈ ಪ್ರಸ್ತಾಪಿತ ಕಾಯ್ದೆ ಪ್ರಕಾರ ವಕೀಲರ ಮೇಲೆ ಅಪರಾಧ ಎಸಗುವ ಪ್ರತಿಯೊಬ್ಬ ಅಪರಾಧಿಯು ಆರು ತಿಂಗಳಿನಿಂದ ಮೂರು ವರ್ಷದ ವರೆಗೆ ವಿಸ್ತರಿಸಬಹುದಾದ ಅವಧಿಯ ಜೈಲು ಅಥವಾ ಒಂದು ಲಕ್ಷ ರೂಪಾಯಿ ದಂಡನೆಗೆ ಒಳಗಾಗುತ್ತಾರೆ.

2) ಅಥವಾ‌ ಮೇಲಿನ ಎರಡನ್ನೂ ವಿಧಿಸಬಹುದಾದ ಶಿಕ್ಷೆಗೆ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು.

ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ವಕೀಲರ ಮೇಲೆ ಹಲ್ಲೆ, ದೌರ್ಜನ್ಯದಂತ ಅಪರಾಧಗಳು ನಡೆದರೆ ಅಥವಾ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ, ಅಂತಹ ವ್ಯಕ್ತಿಗಳನ್ನು ಈ ಕಾಯ್ದೆ ಪ್ರಕಾರ ವಿಚಾರಣೆ ಬಳಿಕ ದಂಡನೆಗೆ ಗುರಿಪಡಿಸಬಹುದು.

ಸಂಜ್ಞೇಯ ಅಪರಾಧಕ್ಕೆ ಸಂಬಂಧಿಸಿದಂತೆ ಯಾವುದೇ ವಕೀಲರನ್ನು ಪೊಲೀಸರು ಬಂಧಿಸಿದಾಗ ಅಂತಹ ಬಂಧನದ 24 ಗಂಟೆಯ ಒಳಗೆ ಆರೋಪಿತ ವಕೀಲರು ಸದಸ್ಯರಾಗಿರುವ ವಕೀಲರ ಸಂಘದ ಅಧ್ಯಕ್ಷ ಅಥವಾ ಕಾರ್ಯದರ್ಶಿಗೆ ಮಾಹಿತಿ ನೀಡತಕ್ಕದ್ದು.

ದಂಡನೀಯವಾದ ಪ್ರತಿಯೊಂದು ಅಪರಾಧವನ್ನು ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಗಳಿಗೆ ಕಡಿಮೆ ಇರದ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಎಂದು ಕಾಯ್ದೆಯಲ್ಲಿ ವಿಧಿಸಲಾಗಿದೆ.

ಬಹುದಿನಗಳ ಬೇಡಿಕೆಯಾಗಿದ್ದ ವಕೀಲರ ಸಂರಕ್ಷಣಾ ಕಾಯಿದೆ ಕೊನೆಗೂ ಜಾರಿಗೆ ಬಂದಿದ್ದು ಇನ್ನು ಮುಂದಾದರೂ ವಕೀಲರ  ಮೇಲೆ ಹಲ್ಲೆ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆ ಇದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...