Home ರಾಜ್ಯಪೊಲೀಸ್ ಇಲಾಖೆ ಪರ ಯತ್ನಾಳ್ ಬ್ಯಾಟಿಂಗ್ ಸಚಿವ ಕೃಷ್ಣಭೈರೇಗೌಡ ರಿಂದ ಪೊಲೀಸರಿಗೆ ಗುಡ್ ನ್ಯೂಸ್..!

ಪೊಲೀಸ್ ಇಲಾಖೆ ಪರ ಯತ್ನಾಳ್ ಬ್ಯಾಟಿಂಗ್ ಸಚಿವ ಕೃಷ್ಣಭೈರೇಗೌಡ ರಿಂದ ಪೊಲೀಸರಿಗೆ ಗುಡ್ ನ್ಯೂಸ್..!

by EDITOR NEWS WARRIORS
0 comments

ಬೆಳಗಾವಿ: ಪೋಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳ ‍ ವರ್ಗಾವಣೆಯ ಅವಧಿಯನ್ನು ಒಂದು ವರ್ಷದ ಬದಲಾಗಿ 2 ವರ್ಷಕ್ಕೆ ಹೆಚ್ಚಿಸುವ ಮನವಿಯನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಶೀಲಿಸುತ್ತಿದ್ದು, ಕ್ರಮವಹಿಸಲಿದೆ.

ಪೋಲೀಸ್ ಸಿಬ್ಬಂದಿಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶೂನ್ಯ ವೇಳೆಯಲ್ಲಿ ಮಾತನಾಡಿ, ಪೋಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೇವೆ ಸಲ್ಲಿಸುವ ಸ್ಥಳದಲ್ಲಿ ಒಂದು ವರ್ಷದ ಸೇವಾ ಅವಕಾಶವನ್ನು ನೀಡಲಾಗಿದೆ. ಅಪರಾಧ ಪ್ರಕರಣಗಳ ಪತ್ತೆ ಹಾಗೂ ಅಪರಾಧಿಗಳನ್ನು ಗುರುತಿಸಿ ಕ್ರಮವಹಿಸುವಲ್ಲಿ ಈ ಒಂದು ವರ್ಷ ಸಿಬ್ಬಂದಿಗಳಿಗೆ ಸಾಕಾಗುವುದಿಲ್ಲ. ಅವರ ಪರಿಣಾಮಕಾರಿ ಕರ್ತವ್ಯಕ್ಕೆ ಅನುಕೂಲವಾಗಲು ಕನಿಷ್ಠ ಎರಡು ವರ್ಷಗಳವರೆಗೆ ವರ್ಗಾವಣೆಯಿಂದ ವಿನಾಯಿತಿ ನೀಡಬೇಕು. ಈ ಕುರಿತು ಪೋಲೀಸ್ ಇಲಾಖೆ ನಿಯಮಗಳಿಗೆ ತಿದ್ದುಪಡಿ ತರಬೇಕೆಂದು ಅವರು ಆಗ್ರಹಿಸಿದರು.

ಇದಕ್ಕೆ ಗೃಹ ಸಚಿವರ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸಿ, ಈ ಕುರಿತು ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಮತ್ತು ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...