Home ರಾಜ್ಯದುಷ್ಕರ್ಮಿಗಳನ್ನು ಮಟ್ಟಹಾಕಿ, ಸಣ್ಣಪುಟ್ಟ ರೌಡಿಗಳ ಮೇಲೆ ಹಾಕಿರುವ ಕೇಸುಗಳನ್ನು ಬಿಟ್ಟಾಕಿ, ಗೃಹಸಚಿವ ಆರಗ ಜ್ಞಾನೇಂದ್ರ ಅವರಿಂದ ಪೊಲೀಸರಿಗೆ ಖಡಕ್ ಸೂಚನೆ…

ದುಷ್ಕರ್ಮಿಗಳನ್ನು ಮಟ್ಟಹಾಕಿ, ಸಣ್ಣಪುಟ್ಟ ರೌಡಿಗಳ ಮೇಲೆ ಹಾಕಿರುವ ಕೇಸುಗಳನ್ನು ಬಿಟ್ಟಾಕಿ, ಗೃಹಸಚಿವ ಆರಗ ಜ್ಞಾನೇಂದ್ರ ಅವರಿಂದ ಪೊಲೀಸರಿಗೆ ಖಡಕ್ ಸೂಚನೆ…

by EDITOR NEWS WARRIORS
0 comments

ಬೆಂಗಳೂರು>>ಸಣ್ಣಪುಟ್ಟ ಘಟನೆಯಲ್ಲಿ ಭಾಗಿಯಾದವರನ್ನೂ ರೌಡಿಪಟ್ಟಿಗೆ ಸೇರಿಸಲಾಗಿದೆ. ಅವರೇನು ಸಮಾಜಘಾತುಕ ಕೆಲಸ ಮಾಡಿಲ್ಲ. ಕಾನೂನುಭಂಗ ಉಂಟು ಮಾಡಿಲ್ಲ. ಅಂತಹವರ ಮೇಲೆ ರೌಡಿಶೀಟರ್ ಓಪನ್ ಮಾಡಲಾಗಿದೆ. ಈ ರೀತಿಯಲ್ಲಿ ಸಾವಿರಾರು ರೌಡಿಗಳಿದ್ದಾರೆ.


ಇಂತಹವರನ್ನ ರೌಡಿ ಪಟ್ಟಿಯಿಂದ ಕೈ ಬಿಡಲು ಪೊಲೀಸ್ ಸಮಾವೇಶದಲ್ಲಿ ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವರು, ಜಾನುವಾರು ಕಡಿಯುವ ಉದ್ದೇಶಕ್ಕೆ ಸಾಗಾಣೆ ಮಾಡುವುದಕ್ಕೆ ಇನ್ನು ಮುಂದೆ ಕಡಿವಾಣ ಹಾಕಲಾಗುವುದು. ಸಾಗಾಣೆ ಮಾಡದಂತೆ ತಡೆಗಟ್ಟಲಾಗುವುದು ಎಂದರು.

ಕ್ರೈಮ್ ಮೀಟಿಂಗ್ ಗಳು ಪ್ರತಿತಿಂಗಳು ನಡೆಸಬೇಕು. ಎಫ್​ಐಆರ್ ಹಾಕಿ ನಿಗಧಿತ ದಿನಗಳಲ್ಲಿ ಚಾರ್ಜ್ ಶೀಟ್ ಹಾಕುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಲಾಗಿದೆ. ಹಾಗೆಯೇ ಶಿಕ್ಷೆ ಪ್ರಮಾಣ ಹೆಚ್ಚುವಂತೆ ಮಾಡಬೇಕು. ಸ್ಪೋಟಕ ವಸ್ತು ತಯಾರಿಕೆ ಮತ್ತು ಸಾಗಾಣಿಕೆ ನಿಗಾ ವಹಿಸಬೇಕು. ಲಾಜಿಕಲ್ ಎಂಡ್ ಗೆ ಹೋಗಬೇಕು. ಸಮಾಜ ವಿದ್ರೋಹಿ ಕೈಗಳಿಗೆ ಸಿಗದಂತೆ ತಡೆದು ಮಟ್ಟ ಹಾಕಬೇಕು. ಪೊಲೀಸ್ ಬೀಟ್ ಸಿಸ್ಟಂ ಬಲಪಡಿಸಬೇಕು. ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಬೀಟ್ ಪರಿಣಾಮಕಾರಿಯಾಗುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎನ್ ಐ ಎ ಘಟಕ ಬೆಂಗಳೂರು ಅಥವಾ ಮಂಗಳೂರಿನಲ್ಲಿ ತೆರೆಯಲು ಕೇಂದ್ರಕ್ಕೆ ಶಿಫಾರಸು ಮಾಡ್ತೇವೆ. ವಿದೇಶಿಗರು ರಾಜ್ಯದಲ್ಲಿ ಹಲವರು ಮಂದಿ ಅನಧಿಕೃತವಾಗಿ ನೆಲೆಸಿದ್ದಾರೆ. ಡ್ರಗ್ಸ್ ಹಾಗೂ ಅನಧಿಕೃತ ಚಟುವಟಿಕೆಗಳಲ್ಲಿ ಭಾಗಿಯಾಗ್ತಿದ್ದಾರೆ. ವೀಸಾ ಅವಧಿ, ಎಲ್ಲಿಯವರು, ಏನು ಕೆಲಸ ಮಾಡ್ತಾರೆ ಎಲ್ಲವನ್ನು ಸರ್ವೆ ಮಾಡಲು ತೀರ್ಮಾನ ಮಾಡಿದ್ದೇವೆ. ಅವಧಿಬದ್ಧವಾಗಿ ಸರ್ವೆ ಮಾಡಲು ಸೂಚಿಸಿದ್ದೇವೆ. ಆಘ್ಘಾನ್ ರಾಜಕೀಯ ವ್ಯತ್ಯಾಸದ ಬಳಿಕ ಅಕ್ರಮ ವಿದೇಶಿಗರ ಬಗ್ಗೆ ಮಾಹಿತಿ ಕಲೆ ಹಾಕಲು ಹೇಳಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಸಣ್ಣಪುಟ್ಟ ಘಟನೆಯಲ್ಲಿ ಭಾಗಿಯಾದವರನ್ನೂ ರೌಡಿಪಟ್ಟಿಗೆ ಸೇರಿಸಲಾಗಿದೆ. ಅವರೇನು ಸಮಾಜಘಾತುಕ ಕೆಲಸ ಮಾಡಿಲ್ಲ. ಕಾನೂನುಭಂಗ ಉಂಟು ಮಾಡಿಲ್ಲ. ಅಂತಹವರ ಮೇಲೆ ರೌಡಿಶೀಟರ್ ಓಪನ್ ಮಾಡಲಾಗಿದೆ. ಈ ರೀತಿಯಲ್ಲಿ ಸಾವಿರಾರು ರೌಡಿಗಳಿದ್ದಾರೆ. ಇಂತಹವರನ್ನ ರೌಡಿ ಪಟ್ಟಿಯಿಂದ ಕೈ ಬಿಡಲಾಗುವುದು. ಅನೇಕ ಮಾನದಂಡ ಇಟ್ಟು ರೌಡಿ ಶೀಟರ್ ಪಟ್ಟಿ ಪರಾಮರ್ಶೆ ಮಾಡುತ್ತೇವೆ.


ಹೀಗಾಗಿ ರೌಡಿಶೀಟರ್ ಪಟ್ಟಿಯನ್ನು ಪರಾಮರ್ಶೆ ಮಾಡುವುದಕ್ಕೆ ನಿಯಮಾವಳಿ ಅಡಿಯಲ್ಲಿ ಅವಕಾಶವಿದೆ. ರಾಜ್ಯದಾದ್ಯಂತ ಸಣ್ಣಪುಟ್ಟ ಚಳುವಳಿಗಾರರ ಮೇಲೆ ರೌಡಿಶಿಟ್ ಹಣೆ ಪಟ್ಟಿ ಕಟ್ಡಿದ್ದಾರೆ. ಇದರಲ್ಲಿ ಯಾವುದೇ ಬೇರೆ ಉದ್ದೇಶ ಇಲ್ಲ. ಜೊತೆಗೆ ರಾಜಕೀಯ ಕಾರಣಕ್ಕೂ ನಾವು ಹೀಗೆ ಮಾಡ್ತಿಲ್ಲ. ಇದನ್ನುನಿಗದಿತ ದಿನಾಂಕದೊಳಗೆ ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾಗಬೇಕು ಎಂದರು.

ಕರಾವಳಿ ಪ್ರದೇಶದಲ್ಲಿ ತುಂಬಾ ವಿಚಿತ್ರಕಾರಕ ಶಕ್ತಿಗಳು ತಲೆ ಎತ್ತುವ ಸ್ಥಿತಿ ಇದೆ. ಗೋವಾದಿಂದ ಕೇರಳ ಬಾರ್ಡರ್ ವರೆಗೆ ಮೀನುಗಾರರ ವೇಷದಲ್ಲಿ ಬಂದು ಬಾಂಬೆಯಲ್ಲಿ ನಡೆಸಿದ ಕೃತ್ಯ ಎಲ್ಲರಿಗೂ ಗೊತ್ತಿದೆ. ಕರಾವಳಿ ಕಾವಲು ಪಡೆ ಇನ್ನಷ್ಡು ಬಲಗೊಳ್ಳಬೇಕು ಎಂದು ಸೂಚನೆ ನೀಡಿದ್ದೇವೆ. ಕರಾವಳಿ ಕಾವಲು ಪಡೆಗೆ ಇನ್ನಷ್ಟು ಸ್ಪೀಡ್ ಬೋಟ್​ ಗಳನ್ನು ಒದಗಿಸಲು ಸಿದ್ದರಾಗಿದ್ದೇವೆ. ದೇಶ ವಿರೋಧಿ ಕೃತ್ಯ, ದಂಧೆ ನಡೆಸುವವರ ಮೇಲೆ ಕಣ್ಗಾವಲು ಇಡಲು ಹೇಳಿದ್ದೇವೆ. ಪಟ್ಟಣ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥಿತ ಭಂಗ ಮಾಡುವ ರೌಡಿ ಪಡೆಗಳನ್ನು ಮೆಟ್ಟಿ ನಿಲ್ಲಬೇಕು ಅಂತ ಹೇಳಿದ್ದೇವೆ. ಜನರ ನೆಮ್ಮದಿ ಬದುಕಿಗೆ ತೊಂದರೆ ಉಂಟು ಮಾಡುವ ದುಷ್ಕರ್ಮಿಗಳನ್ನು ಮಟ್ಡ ಹಾಕಲು ಸೂಚಿಸಿದ್ದೇವೆ ಎಂದರು.

ಬೆಂಗಳೂರು ನಗರದಲ್ಲಿ ಅಕ್ರಮ ಕ್ಯಾಸಿನೋಗಳು ಹೆಚ್ಚಾಗಿದ್ದು, ಎಲ್ಲೆಲ್ಲಿ ಅಕ್ರಮ ಕ್ಯಾಸಿನೋ ಕ್ಲಬ್ ಮಟ್ಕಾ ನಡೆಯುತ್ತಿದೆ. ಆಯಾ ಸ್ಟೇಷನ್ ಪೊಲೀಸ್ ಅಧಿಕಾರಿಗಳನ್ನೇ ಹೊಣೆ ಮಾಡ್ತೀವಿ. ಅಕ್ರಮ ತಡೆಯದಿದ್ದರೆ ಅಂಥ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡ್ತೀವಿ ಎಂದು ಹೇಳಿದರು.

ಒಟ್ಟಿನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ದುಷ್ಕರ್ಮಿಗಳನ್ನು ಸದೆಬಡಿಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಸೂಚಿಸಲಾಗಿದೆ. ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು…

ವರದಿ …ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...