Home ರಾಜ್ಯBig news: NPS/OPS ಆಯ್ಕೆ ನೌಕರರದ್ದು..! ಏನಿದು ಸರ್ಕಾರದ ಆದೇಶ..?

Big news: NPS/OPS ಆಯ್ಕೆ ನೌಕರರದ್ದು..! ಏನಿದು ಸರ್ಕಾರದ ಆದೇಶ..?

by EDITOR NEWS WARRIORS
0 comments

ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಓ ಪಿ ಎಸ್ (OPS) ಜಾರಿಯ ಬಗ್ಗೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು ಈ ಆದೇಶದ ಪ್ರಕಾರ ದಿನಾಂಕ 1.4.2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾಗಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರಿ ಸೇವೆಗೆ ಸೇರಿದ ನೌಕರರನ್ನು ಹಳೇಯ ಪಿಂಚಣಿ ಯೋಜನೆಗೆ ಒಳಪಡಿಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.


ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಒಪ್ಪಿಗೆ ಮೇರೆಗೆ ಕೆಳಕಂಡ ಷರತ್ತುಗಳಿಗೊಳಪಟ್ಟು ಒಂದು ಬಾರಿಗೆ ಕ್ರಮವಾಗಿ ಹಿಂದಿನ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಬಹುದು ಎಂದು ಆದೇಶ ನೀಡಿದೆ.

ಷರತ್ತುಗಳೇನು..?


ಸರ್ಕಾರಿ ನೌಕರರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ಇಚ್ಛಿಸಿದಲ್ಲಿ ತಮ್ಮ ಒಪ್ಪಿಗೆಯನ್ನು ಸರ್ಕಾರ ಹೊರಡಿಸಿರುವ ನಿಗಧಿತ ನಮೂನೆಯಲ್ಲಿ ದಿನಾಂಕ: 20.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ, ನೇರವಾಗಿ ಸಲ್ಲಿಸತಕ್ಕದ್ದು, ಆದರೆ ಒಂದು ಬಾರಿಗೆ ಮಾತ್ರ ಈ ಅವಕಾಶ ಚಲಾಯಿಸಲು ಅವಕಾಶವಿರುತ್ತದೆ. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಷರತ್ತು ವಿಧಿಸಲಾಗಿದೆ.


ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ. ನೌಕರರ ಆಯ್ಕೆಗನುಸಾರವಾಗಿ ಅವರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಮರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...