Home ತೀರ್ಥಹಳ್ಳಿThirthalli: ಭಾರತದ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮ್ಮಿತ ಸಂವಿಧಾನ ಜಾಗೃತಿ ಜಾಥಾ..!

Thirthalli: ಭಾರತದ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮ್ಮಿತ ಸಂವಿಧಾನ ಜಾಗೃತಿ ಜಾಥಾ..!

by EDITOR NEWS WARRIORS

ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮಿತ್ತ ಸಂವಿಧಾನ ಜಾಗೃತಿ ಜಾಥಾ ಯಾತ್ರೆಯು ಇಂದು  ಸಂಜೆ 6-00 ಗಂಟೆಗೆ ಮೇಗರವಳ್ಳಿ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದು ಜಾಗೃತಿ ಜಾಥಾ ವಾಹನವನ್ನು ಆರಳಿಕಟ್ಟೆ ಸರ್ಕಲ್ ನಿಂದ ಬಲೂನ್ ಮತ್ತು ಕ್ಯಾಂಡಲ್ ಹಾಗೂ ಪೂರ್ಣ ಕುಂಭ ಸ್ವಾಗತದೊಂದಿಗೆ ಜಾಥಾ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯವರು ವಿವಿಧ ಶಾಲೆಗಳ ಮಕ್ಕಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಅಂಗನವಾಡಿ ಆಶಾ ಕಾರ್ಯಕರ್ತೆಯರು ವಿವಿಧ ಶಾಲೆಯ ಶಿಕ್ಷಕರು ಸಾರ್ವಜನಿಕರು ವಿವಿಧ ಇಲಾಖೆ ಅಧಿಕಾರಿಗಳು ಒಳಗೊಂಡಂತೆ ಸ.ಹಿ.ಪ್ರಾಥಮಿಕ ಶಾಲಾ ಆವರಣದಲ್ಲಿ ಜಾಥದೊಂದಿಗೆ ಸ್ವಾಗತಿಸಲಾಯಿತು.

ಈ ಕಾರ್ಯಕ್ರಮದ ಪ್ರಯುಕ್ತ ಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಮತ್ತು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಯಿತು. ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಡಾ/ ಬಿ,ಆರ್ ಅಂಬೇಡ್ಕರ್ ಮತ್ತು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಜ್ಯೋತಿ ಬೆಳಗುವುದರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಎಂ.ಎಸ್. ದೇವೇಂದ್ರ ಇವರು ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿರುವ ಸರ್ವರನ್ನು ಪಿಡಿಒ ಶ್ರೀಮತಿ ಭಾರತಿ ಎಂ. ಇವರು ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಆಶಾಲತಾ ಇವರು ಸಂವಿಧಾನದ ಕುರಿತು ಪ್ರಾಸ್ತಾವಿಕ ನುಡಿಗಳನಾಡಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗರವಳ್ಳಿ ಶಾಲಾ ಮಕ್ಕಳು ದೇಶಭಕ್ತಿ ಗೀತೆಯನ್ನು ಹಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಬಾಳೆಬೈಲ್ ಪದವಿ ವಿದ್ಯಾರ್ಥಿನಿ ಕು// ದೀಪ್ತಿ ಮೇಗರವಳ್ಳಿ ಗನವಳ್ಳಿ, ಇವರು ಸಂವಿಧಾನ ಕುರಿತು ಉಪನ್ಯಾಸ ನೀಡಿದರು ಹಾಗೂ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಮತ್ತು ಪ್ರಸ್ತಾವನೆಯ ಪ್ರತಿಜ್ಞಾವಿಧಿ ಭೋದಿಸಲಾಯಿತು. 

ಕ್ಷೇತ್ರಶಿಕ್ಷಣಾಧಿಕಾರಿಗಳು, ಮತ್ತು ತಾಲ್ಲೂಕು ನೊಡೆಲ್ ಅಧಿಕಾರಿ ಶ್ರೀ ಸಂತೋಷರವರು ಹಾಗೂ ಮೇಗರವಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಪ್ರತೀಮಾ ಕೆ.ಎಸ್.ಪುಟ್ಟಪ್ಪ, ಸದಸ್ಯರಾದ  ಜಿ.ಕೆ.ಶ್ರೀನಿವಾಸ,  ಅಜೀತ್ ಅಣ್ಣುವಳ್ಳಿ,  ನವಿನ್ ತೊಟದ ಮನೆ, ಶ್ರೀಮತಿ ಪಾರ್ವತಿ ರವಿ ಶ್ರೀಮತಿ ಲಕ್ಷ್ಮೀ ನರಸಿಂಹ, ಶ್ರೀಮತಿ ಜೀನತ್ ಭಾನು, SDMS ಅಧ್ಯಕ್ಷರುಗಳಾದ  ವೆಂಕಟೇಶ್ ಹೆಗ್ಡೆ,  ಮಹೇಶ‍್ ಮತ್ತು ಶಾಲಾ ಮುಖ್ಯೋಪಾಧ್ಯಾಯರು , ಹಾಗೂ ಸಹ ಶಿಕ್ಷಕರು ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಒಕ್ಕೂಟದ ಸದಸ್ಯರು, ಶಾಲಾ ಮಕ್ಕಳು, ಪೋಷಕರು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ವಂದನಾರ್ಪಣೆ ಶ್ರೀಮತಿ  ರಾಜೇಶರವರು ಇವರು ನೆರವೇರಿಸಿದರು. ಪಿಡಿಒ ಶ್ರೀಮತಿ ಭಾರತಿ ಎಂ ಇವರು ಪೂರ್ಣ ಕಾರ್ಯಕ್ರಮವನ್ನು ನಿರೂಪಣೆ ನಡೆಸಿ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!