Home ಶಿವಮೊಗ್ಗShivamogga:ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ- ಸ್ಥಳ ಪರಿಶೀಲಿಸಿದ ಸಚಿವ ಮಧು ಬಂಗಾರಪ್ಪ..!

Shivamogga:ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ- ಸ್ಥಳ ಪರಿಶೀಲಿಸಿದ ಸಚಿವ ಮಧು ಬಂಗಾರಪ್ಪ..!

by EDITOR NEWS WARRIORS
0 comments

ಶಿವಮೊಗ್ಗ :ಜಿಲ್ಲಾ ಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ ಫೆ.24 ರಂದು ನಡೆಯಲಿದ್ದು, ಈ ಸಮಾವೇಶ ನಡೆಯಲಿರುವ ಅಲ್ಲಮ ಪ್ರಭು ಮೈದಾನಕ್ಕೆ ಇಂದು ಬೆಳಿಗ್ಗೆ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಭೇಟಿ ಮಾಡಿ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಚರ್ಚಿಸಿದರು.

ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ಸಮಾವೇಶಕ್ಕೆ ಜಿಲ್ಲೆಯ ಫಲಾನುಭವಿಗಳು ಸುಮಾರು 60 ಸಾವಿರ ಸಂಖ್ಯೆಯಲ್ಲಿ ಆಗಮಿಸಿ ಹಬ್ಬದ ವಾತಾವರಣ ನಿರ್ಮಿಸಲಿದ್ದಾರೆ. ಆ ಹೆಣ್ಣುಮಕ್ಕಳೇ ಹೆತ್ತ ರಾಜ್ಯ ಸರ್ಕಾರದ ಈ ಸಮಾವೇಶ ಅತ್ಯಂತ ಯಶಸ್ವಿಯಾಗಲಿದೆ. ತಾಲ್ಲೂಕುಗಳಲ್ಲಿ ನಡೆಸಿದ ಸಮಾವೇಶಗಳ ಫೀಡ್ ಬ್ಯಾಕ್ ಕೂಡ ಅದ್ಭುತವಾಗಿದೆ ಎಂದರು.

ಈ ಸಮಾವೇಶವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಸರ್ಕಾರದ ಅನೇಕ ಮಂತ್ರಿಗಳು ಉಪಸ್ಥಿತರಿರುತ್ತಾರೆ. ಜೊತೆಗೆ, ಈ ಮೈದಾನಕ್ಕೆ ಅಲ್ಲಮ ಪ್ರಭು ಹೆಸರನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿರುವುದರಿಂದ ಆ ನಾಮಫಲಕವನ್ನು, ಅಲ್ಲಮನ ವಚನಗಳ ಕಾಂಪೌಂಡ್ ಗ್ಯಾಲರಿಯನ್ನು ಡಿಕೆಶಿಯವರೇ ಅನಾವರಣ ಮಾಡಲಿದ್ದಾರೆಂದು ಮಧು ಬಂಗಾರಪ್ಪ ಹೇಳಿದರು.

ಜೊತೆ ಜೊತೆಗೆ, ಶಕ್ತಿ ಯೋಜನೆಗೆ ಸಹಕಾರಿಯಾಗಲೆಂದು ಶಿವಮೊಗ್ಗ ಜಿಲ್ಲೆಗೆ 100 ಹೊಸ ಬಸ್ ಗಳನ್ನು ಕೇಳಿದ್ದು, ಮೊದಲ ಹಂತದಲ್ಲಿ 10 ನೂತನ ಬಸ್ ಗಳ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಡುತ್ತಿದೆ. ಇದಕ್ಕೇ ಸಮಾವೇಶದಂದೇ ಡಿಕೆಶಿ ಚಾಲನೆ ನೀಡಲಿದ್ದಾರೆ.ಇದು ನಿರಂತರ ಪ್ರಕ್ರಿಯೆ ಆಗಿರುತ್ತೆ ಎಂದರು.

ವಿದ್ಯಾರ್ಥಿ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು, ಮೊಟ್ಟೆ ಕೊಡಲಾಗುತ್ತಿದೆ. ಅವರಲ್ಲಿ ಪೌಷ್ಠಿಕತೆ ಹೆಚ್ಚಿಸಲು ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮೊದಲ ಹಂತದಲ್ಲಿ 59 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ಉದ್ದೇಶಿಸಿದೆ. ಸರ್ಕಾರ ಇಂಥ ಗ್ಯಾರಂಟಿ ಯೋಜನೆಗಳ ಮೂಲಕ ಜನರ ದಿನನಿತ್ಯದ ದಿನಚರಿಯಲ್ಲಿ ವಿಶೇಷ ಪಾತ್ರವಹಿಸುತ್ತಿರುವುದು ಸಂತೋಷದ ವಿಷಯ ಎಂದರು ಮಧು ಬಂಗಾರಪ್ಪ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ ಪಿ ಮಿಥುನ್ ಕುಮಾರ್, ಸಿಇಓ ಲೋಖಂಡೆ, ಉಪ ವಿಭಾಗಾಧಿಕಾರಿ ಸತ್ಯನಾರಾಯಣ್, ನಗರಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್, ಮಾಜಿ ಶಾಸಕ ಆರ್.ಪ್ರಸನ್ನ ಕುಮಾರ್, ಎನ್ ರಮೇಶ್, ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ್,ಮುಹೀಬ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷ, ಸೇರಿದಂತೆ ಹಲವರಿದ್ದರು.

ಅಂತಿಮವಾಗಿ, ಅಲ್ಲಮ ಪ್ರಭು ಮೈದಾನದ ಸಮಾವೇಶದ ವೇದಿಕೆಗೆ ಅಕ್ಕ ಮಹಾದೇವಿ ಹೆಸರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಂತಿಮಗೊಳಿಸಿದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...