Home ಶಿವಮೊಗ್ಗShivamogga:ಸುಳ್ಳು ಹೇಳ್ತಿರೋದು ಕಾಂಗ್ರೆಸ್ ಅಲ್ಲ ಮೋದಿ ಮತ್ತು ಬಿಜೆಪಿ ಹೆಚ್,ಎಸ್ ಸುಂದರೇಶ್..!

Shivamogga:ಸುಳ್ಳು ಹೇಳ್ತಿರೋದು ಕಾಂಗ್ರೆಸ್ ಅಲ್ಲ ಮೋದಿ ಮತ್ತು ಬಿಜೆಪಿ ಹೆಚ್,ಎಸ್ ಸುಂದರೇಶ್..!

by EDITOR NEWS WARRIORS
0 comments

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೃಹತ್ rally ಮೂಲಕ ಆಗಮಿಸಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಹೇಳಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, rally ಯು ಬುಧವಾರ ಬೆಳಿಗ್ಗೆ 10 ಕ್ಕೆ ಭದ್ರಾವತಿಯಲ್ಲಿ ಆರಂಭವಾಗಿ 11 ಕ್ಕೆ ಶಿವಮೊಗ್ಗದ ಎಂ ಆರ್ ಎಸ್ ಸರ್ಕಲ್ ಬಳಿ ಆಗಮಿಸಿ ಅಲ್ಲಿಂದ ಬೃಹತ್ ಮೆರವಣಿಗೆಯ ಮೂಲಕ ಲಗಾನ್ ಕಲ್ಯಾಣ ಮಂದಿರಕ್ಕೆ ಬರುತ್ತಾರೆ ಎಂದರು.
ಈ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಸಂಗಮೇಶ್, ಗೋಪಾಲಕೃಷ್ಣ ಬೇಳೂರು ಸೇರಿದಂತೆ ಎಲ್ಲರೂ ಉಪಸ್ಥಿತರಿರುವರು ಎಂದು ಹೇಳಿದರು.

ಸುಳ್ಳು ಹೇಳ್ತಿರೋದು ಕಾಂಗ್ರೆಸ್ ಅಲ್ಲ ಮೋದಿ ಮತ್ತು ಬಿಜೆಪಿ:

ಸುಳ್ಳು ಮತ್ತು ಸತ್ಯದ ನಡುವೆ ಚುನಾವಣೆ. ಲಕ್ಷ ಜನ ಐದು ಜಿಲ್ಲೆಗಳಿಂದಲೂ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಸೇರಿಲ್ಲ. ಹಣ ಕೊಟ್ಟು ಕರೆತಂದ ಜನ ಇದ್ದರಷ್ಟೇ.

ಮೋದಿ ಮತ್ತು ಎಸ್ ಬಿಐಗೆ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ವಿಚಾರದಲ್ಲಿ ಕಪಾಳಮೋಕ್ಷ ಮಾಡಿದೆ.
ಇಡಿ,ಐಟಿ ರೈಡ್ ಮಾಡಿಸಿ ಹೆದರಿಸಿ ಹಣ ವಸೂಲಿ ಮಾಡಲಾಗಿದೆ. ಮೋದಿಗೆ ಕಾಂಗ್ರೆಸ್ ವಿರುದ್ಧ ಮಾತಾಡುವ ನೈತಿಕತೆ ಇಲ್ಲ.

ಗೀತಾ ಶಿವರಾಜ್ ಕುಮಾರ್ ರವರು ಗೆಲ್ಲೋದು ಗ್ಯಾರಂಟಿ. ಕುಟುಂಬ ರಾಜಕಾರಣದ ಬಗ್ಗೆ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿದ್ದ ಈಶ್ವರಪ್ಪ ಈಗ ಮಗನಿಗೆ ಟಿಕೇಟ್ ಕೇಳ್ತಿರೋದು ದುರಂತ. ಸುಳ್ಳು ಹೇಳ್ತಿರೋದು ಕಾಂಗ್ರೆಸ್ ಅಲ್ಲ ಮೋದಿ ಮತ್ತು ಬಿಜೆಪಿ.

ಆರ್ಥಿಕ ಸದೃಢತೆಗೆ ಮತ್ತೆ ಐದು ಗ್ಯಾರಂಟಿಗಳ ಘೋಷಣೆ ರಾಹುಲ್ ಗಾಂಧಿ ಮತ್ತು ಖರ್ಗೆಯವರಿಂದ.
ಯುವಕರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ರಕ್ಷಣೆ ಕೊಡುವ ಕೆಲಸ ಕಾಂಗ್ರೆಸ್ ಮಾಡಲಿದೆ.

ಪಂಚ ಗ್ಯಾರಂಟಿಗಳು ಫಲಾನುಭವಿಗಳಿಗೆ ಅನುಕೂಲವಾಗಿದೆ. ಖಜಾನೆ ಖಾಲಿಯಾಗಿಲ್ಲ. ಮೋದಿ ಸರ್ಕಾರ ಸಾಲದಲ್ಲಿದೆ. ಅಂಧಭಕ್ತಿ ಸತ್ಯ ನೋಡದಂತೆ ಮಾಡಿದೆ.

ಮೋದಿ ಗ್ಯಾರಂಟಿ ಇಲ್ಲೀವರೆಗೆ ಆಗಿಲ್ಲ. ಹತ್ತು ವರ್ಷಗಳಲ್ಲಿ ಸಾಲ ಮಾಡಿದ್ದೇ ಗ್ಯಾರಂಟಿ ಸಾಧನೆ ಮೋದಿದು. ಭಾರತ ಮಾತಾ ಕೀ ಜೈ ಅನ್ನೋರು ಕುಸ್ತಿಪಟುವಿನ ನೋವು ಅರ್ಥ ಮಾಡಿಕೊಂಡಿಲ್ಲ. ಮಣಿಪುರದ ಬಗ್ಗೆ ಮಾತಾಡಲ್ಲ…

ಪ್ರಧಾನಿಯ ಮುಂದೆ ಯಾವುದೇ ಸಾಧನೆಯಿಲ್ಲ. ಮೋದಿ ಅಲೆ ಇಲ್ಲವೇ ಇಲ್ಲ. ಈಶ್ವರಪ್ಪರವರೇ ನೇರವಾಗಿ ಸೆಡ್ಡು ಹೊಡೆಯುವಂಥ ಪರಿಸ್ಥಿತಿ ಇದೆ. ನಾವೆಲ್ಲ ಕಾಂಗ್ರೆಸ್ಸಿಗರು
ಒಗ್ಗಟ್ಟಿದ್ದೇವೆ. ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರ್ತೀವಿ. ನೂರಕ್ಕೆ ನೂರು ಗೆಲುವು ನಮ್ಮದೇ…

ಬಂಗಾರಪ್ಪರವರ ಕೊಡುಗೆ ಬಹಳ ದೊಡ್ಡದಿದೆ. ಗೀತಾಶಿವರಾಜ್ ಕುಮಾರ್ ಕೊಡುಗೆ, ಸೇವೆಯೂ ದೊಡ್ಡದಿದೆ.

ಈಶ್ವರಪ್ಪ ಬಂಡಾಯ ಬಹಳ ದೊಡ್ಡ ಲಾಭತರಲಿದೆ. ಬಿಜೆಪಿ ಈಗ ಏನೆಂದು ಅವರಿಗೆ ಅರ್ಥವಾಗಿದೆ. ರೇಣುಕಾಚಾರ್ಯ, ಸಿಟಿ ರವಿ, ಈಶ್ವರಪ್ಪರವರ ಕಥೆ ಏನಾಯ್ತೆಂದು ಎಲ್ಲರಿಗೂ ಗೊತ್ತಾಗಿದೆ

ಪತ್ರಿಕಾಗೋಷ್ಠಿಯಲ್ಲಿ ಆಯನೂರು ಮಂಜುನಾಥ್, ಆರ್.ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್, ಹೆಚ್.ಸಿ.ಯೋಗೇಶ್, ಚಂದ್ರಭೂಪಾಲ್, ಕಲೀಂ ಪಾಷ, ಶಿ.ಜು.ಪಾಶ, ಹೆಚ್ ಎಂ ಮಧು, ರಮೇಶ್ ಶಂಕರಘಟ್ಟ, ಪ್ರವೀಣ್, ಜಿ.ಪದ್ಮನಾಭ್, ಮುಜ್ಜು ಸೇರಿದಂತೆ ಹಲವರಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...