Home ಶಿವಮೊಗ್ಗಆಯನೂರು ಮಂಜುನಾಥ್ ಗೆ   ನೈರುತ್ಯ ಪದವೀಧರ ಕ್ಷೇತ್ರ..!

ಆಯನೂರು ಮಂಜುನಾಥ್ ಗೆ   ನೈರುತ್ಯ ಪದವೀಧರ ಕ್ಷೇತ್ರ..!

by EDITOR NEWS WARRIORS
0 comments

ಬಾರಿ ಕುತೂಹಲ ಮೂಡಿಸಿದ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಅನ್ನು ಕೊನೆಗೂ ಆಯನೂರು ಮಂಜುನಾಥ್ ಗೆ ಕಾಂಗ್ರೆಸ್ ಪಕ್ಷ ನೀಡಿದೆ.

ಹಲವರು ನೈರುತ್ಯ ಪದವೀಧರ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದರು ಅದರಲ್ಲೂ ಪ್ರಮುಖವಾಗಿ ಎಸ್ಪಿ ದಿನೇಶ್ ಪ್ರಬಲ ಆಕಾಂಕ್ಷಿಯಾಗಿದ್ದರು ಆದರೆ ಕಾಂಗ್ರೆಸ್ ಪಕ್ಷ ಮಂಜುನಾಥ್ ಅವರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ.

ಆಯನೂರು ಮಂಜುನಾಥ್ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿಕೊಂಡಾಗ ನೈರುತ್ಯ ಪದವೀಧರ ಕ್ಷೇತ್ರ ತಮಗೆ ನೀಡುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಕೇಳಿಕೊಂಡಿದ್ದರು ಹಾಗೆ ಅವರುಗಳು ಸಹ ನೈರುತ್ಯ ಪದವೀಧರ ಕ್ಷೇತ್ರ ನೀಡುತ್ತೇವೆ ಎಂದು ಆಶ್ವಾಸನೆ ಕೂಡ ನೀಡಿದ್ದರು ಎನ್ನಲಾಗಿತ್ತು.

ಹಾಗೆ ಮುಂದುವರೆದು ಆಯನೂರು ಮಂಜುನಾಥ್ ಅವರು ನೈರುತ್ಯ ಪದವೀಧರ ಕ್ಷೇತ್ರ ತನಗೆ ಸಿಗುತ್ತದೆ ಎನ್ನುವ ಪ್ರಬಲ ನಂಬಿಕೆ ಇಟ್ಟುಕೊಂಡಿದ್ದರು ಹಾಗೆ ಅದಕ್ಕೆ ಪೂರಕವಾಗಿ ಕೆಲಸವನ್ನು ಮಾಡುತ್ತಿದ್ದರು ಸಮಯ ಸಿಕ್ಕಾಗಲೆಲ್ಲ ಇದರ ಬಗ್ಗೆ ಪತ್ರಿಕಾಗೋಷ್ಠಿಗಳಲ್ಲಿ ಹೇಳುತ್ತಿದ್ದರು ಆದರೆ ಎಸ್ಪಿ ದಿನೇಶ್ ತಮಗೆ ನೈರುತ್ಯ ಪದವೀಧರ ಕ್ಷೇತ್ರ ಸಿಗಬೇಕು ಎಂದು ತಮ್ಮ ಬೆಂಬಲಿಗರೊಡನೆ ಅನೇಕ ಬಾರಿ ಹೈಕಮಾಂಡ್ ಅನ್ನು ಭೇಟಿ ಮಾಡಿ ಕಾಂಗ್ರೆಸ್ನ ಮುಖಂಡರನ್ನು ಭೇಟಿ ಮಾಡಿ ತಮ್ಮ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು ಹಾಗೂ ಹಲವು ಬಾರಿ ಪತ್ರಿಕಾಗೋಷ್ಠಿಗಳನ್ನು ನಡೆಸಿ ತಾನು ಪ್ರಬಲ ಆಕಾಂಕ್ಷಿ ಎಂದು ಹೇಳಿಕೊಂಡಿದ್ದರು.

ಹೊರಗಿನಿಂದ ಬರುವವರಿಗೆ ನೀಡುವುದು ಬೇಡ ನಮಗೆ ನೀಡಬೇಕು ಎಂದು ಕೇಳಿಕೊಂಡಿದ್ದರು ಆದರೆ ಕೊನೆಗೂ ಕಾಂಗ್ರೆಸ್ ಎಲ್ಲಾ ಗೊಂದಲಕ್ಕೆ ತೆರೆ ಎಳೆದಿದ್ದು ಆಯನೂರು ಮಂಜುನಾಥ್ ಗೆ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ನೀಡುವುದರ ಮೂಲಕ ಕುತೂಹಲಕ್ಕೆ ತೆರೆ ಎಳೆದಿದೆ ಎನ್ನಬಹುದು.

ರಘುರಾಜ್ ಹೆಚ್‌.ಕೆ..9449553305.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...