Home ರಾಜ್ಯಹಿಂದೂಗಳ ಅಗತ್ಯ ನಮಗೆ ಬೇಡ ಮುಸ್ಲಿಂಮರ ಓಟು ಸಾಕು  ಸಿದ್ದರಾಮಯ್ಯ..!

ಹಿಂದೂಗಳ ಅಗತ್ಯ ನಮಗೆ ಬೇಡ ಮುಸ್ಲಿಂಮರ ಓಟು ಸಾಕು  ಸಿದ್ದರಾಮಯ್ಯ..!

by EDITOR NEWS WARRIORS
0 comments

ಹಿಂದೂಗಳ ಅಗತ್ಯ ನಮಗೆ ಬೇಡ ಮುಸ್ಲಿಂಮರ ಓಟು ಹಾಕು: ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ ಮುಸ್ಲಿಮರ ಓಲೈಕೆ ಕುರಿತು ಬಿಜೆಪಿಯ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ ಎಂಬ ತಲೆಬರಹದಡಿಯಲ್ಲಿ ಸುದ್ದಿ ಒಂದು ಪ್ರಕಟವಾಗಿದ್ದು ಇದು ಎಲ್ಲೆಡೆ ವೈರಲ್ ಆಗಿತ್ತು. 

ಈ ಸುದ್ದಿಯ ಬಗ್ಗೆ ಸ್ಪಷ್ಟ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ :

ಮೇಲ್ಕಂಡ ತಲೆಬರದರಡಿಯಲ್ಲಿ ಪ್ರಕಟವಾದ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು
@BJP4Karnataka
ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!!
ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ.

ಎನ್ನುವ ಸಂದೇಶವನ್ನು ನೀಡಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...