Home ಬಿಜೆಪಿShivamogga breaking:ನಾಳೆ ಚುನಾವಣೆ ಇಂದು ಸಂಸದ ರಾಘವೇಂದ್ರರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ..!

Shivamogga breaking:ನಾಳೆ ಚುನಾವಣೆ ಇಂದು ಸಂಸದ ರಾಘವೇಂದ್ರರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ..!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ವಿನೋದ್ ರಾಜ್ ಲೇಟ್ ಭಾಸ್ಕರ್ ಶೆಟ್ಟಿ ಎನ್ನುವ 29 ವರ್ಷದ ಯುವಕನನ್ನು  ಗಡಿಪಾರು ಮಾಡಿದ್ದು ಹಿಂದುಳಿದ ಗಾಣಿಗರ ಜಾತಿಗೆ ಒಳಪಟ್ಟ ಈ ಯುವಕ ಡ್ರೈವಿಂಗ್ ಮತ್ತು ಸಿಮೆಂಟ್ ಇಟ್ಟಿಗೆ ತಯಾರಿಸುವ ಕೆಲಸ ನಿರ್ವಹಿಸುತ್ತಿದ್ದು ಈತನ ಮೇಲೆ ವಿನಾಕಾರಣ ಇಲ್ಲಸಲ್ಲದ ಆರೋಪಗಳನ್ನು ಹೊರಸಿ ಸಾಗರ ತಾಲೂಕಿನ ಎಸಿ ಗಡಿಪಾರ್ ಆದೇಶ ಹೊರಡಿಸಿದ್ದಾರೆ.

ಈತ ಬಿಜೆಪಿ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು ಕಾಂಗ್ರೆಸ್ ಸರ್ಕಾರ ವಿನಾಕಾರಣ ಈತನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಗಡಿಪಾರು ಮಾಡಲು ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿದೆ. ಕೂಡಲೇ ಈತನ ಗಡಿಪಾರು ಆದೇಶವನ್ನು ರದ್ದುಗೊಳಿಸಬೇಕಾಗಿ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದು ಹಾಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ಕೂಡ ನಡೆಸುತ್ತಿದ್ದಾರೆ.

ಈ ಪ್ರತಿಭಟನೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಜಿಲ್ಲಾಧ್ಯಕ್ಷರಾದ ಟಿಡಿ ಮೇಘರಾಜ್ ಒಳಗೊಂಡಂತೆ ಹಲವು ಬಿಜೆಪಿ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...