Home ಶಿವಮೊಗ್ಗಅಕ್ರಮ ಮಣ್ಣು ಗಣಿಗಾರಿಕೆಗೆ ಕಠಿಣ ಕ್ರಮ ಜಿಲ್ಲಾಧಿಕಾರಿ  ಗುರುದತ್ತ ಹೆಗಡೆ ಎಚ್ಚರಿಕೆ..!

ಅಕ್ರಮ ಮಣ್ಣು ಗಣಿಗಾರಿಕೆಗೆ ಕಠಿಣ ಕ್ರಮ ಜಿಲ್ಲಾಧಿಕಾರಿ  ಗುರುದತ್ತ ಹೆಗಡೆ ಎಚ್ಚರಿಕೆ..!

by EDITOR NEWS WARRIORS
0 comments

ಖಾಸಗಿ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಕೆರೆಯ ಹೋಳು ಹಾಗೂ ಮಣ್ಣನ್ನು ಸೂಕ್ತ ಪ್ರಾಧಿಕಾರದ ಅನುಮತಿ ಇಲ್ಲದೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಕೆರೆ ಹೂಳು ಹಾಗೂ ಮಣ್ಣಿನ ಅನಧಿಕೃತ ಸಾಗಾಣಿಕೆ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸುವುದಾಗಿ ಸೂಚಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ-ಖಾಸಗಿ ಕಾಮಗಾರಿಗಳಿಗೆ, ಕೆರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ  ಕೆರೆಯ ಮಣ್ಣನ್ನು ಉಪಯೋಗಿಸಲು ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆ,  ಗ್ರಾಮ ಪಂಚಾಯತ್‌ಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು.

ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳು ಅರ್ಜಿಯನ್ನು ಪರಿಶೀಲಿಸಿ, ಕೆರೆ ಪ್ರದೇಶದಲ್ಲಿ ಎತ್ತುವಳಿ ಮಾಡಬಹುದಾದ ಹೂಳು/ಮಣ್ಣಿನ ಅಂದಾಜು ಪಟ್ಟಿ ತಯಾರಿಸಿ, ಕೆರೆಯ ಯಾವ ಭಾಗದಲ್ಲಿ ಹೂಳು/ಮಣ್ಣನ್ನು ಎತ್ತುವಳಿ ಮಾಡತಕ್ಕದ್ದು ಎಂಬ ನಕಾಶೆ ಉಳ್ಳ ವಿಸ್ತೃತ ಯೋಜನಾ ವರದಿಯೊಂದಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ರವಾನಿಸುತ್ತವೆ.

ಗ್ರಾಮ ಪಂಚಾಯಿತಿಯ ಪ್ರಾಧಿಕಾರ ಉಳ್ಳ ಕೆರೆಗಳಲ್ಲಿ ಹೂಳು/ಮಣ್ಣು ತೆಗೆಯಲು ಅನುಮತಿ ಕೋರಿದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಅನುಮೋದನೆ ಹಾಗೂ ಸಕ್ಷಮ ಪ್ರಾಧಿಕಾರಿಗಳಿಂದ ಡಿ.ಪಿ.ಆರ್.‌ ತಯಾರಿಸಿಕೊಂಡು ಪ್ರಸ್ತಾವನೆಯನ್ನು ಗಣಿ, ಭೂ ವಿಜ್ಞಾನ ಇಲಾಖೆಗೆ ಸಲ್ಲಿಸಬೇಕು.

ಸೂಕ್ತ ತೀರುವಳಿಗಳು ಹಾಗೂ ದಾಖಲಾತಿಗಳೊಂದಿಗೆ ಸ್ವೀಕೃತಗೊಂಡ ಪ್ರಸ್ತಾವನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪರಿಶೀಲಿಸಿ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994, ತಿದ್ದುಪಡಿ ನಿಯಮಗಳು 2023 ರಂತೆ ಸರ್ಕಾರಕ್ಕೆ ಪಾವತಿಸಬೇಕಾದ ರಾಜಧನ ಮತ್ತು ಇನ್ನಿತರೆ ಶುಲ್ಕಗಳನ್ನು ನಿಗಧಿಪಡಿಸಿ, ಕಾರ್ಯಾದೇಶ ನೀಡಿ, ಕಾರ್ಯಾದೇಶವನ್ನು ಐ.ಎಲ್.ಎಂ.ಎಸ್.‌ ತಂತ್ರಾಂಶದಲ್ಲಿ ನೋಂದಣಿ ಮಾಡಿ ಮಣ್ಣು ಸಾಗಾಣಿಕೆ ಮಾಡಲು ಖನಿಜ ಸಾಗಾಣಿಕೆ ಪರವಾನಿಗೆ ವಿತರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

 ಹೂಳು ಮತ್ತು ಮಣ್ಣು ತೆಗೆಯಲು ಈ ವಿಧಾನವನ್ನು ಕ್ರಮಬದ್ಧವಾಗಿ ಪಾಲನೆ ಮಾಡದೇ, ನಿಯಮಾನುಸಾರ ಕಾರ್ಯಾದೇಶ ಪಡೆಯದೇ, ಜಿಲ್ಲೆಯಾದ್ಯಂತ ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ ಅಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ನಿಯಮಾನುಸಾರ ಹಾಗೂ ಕ್ರಮಬದ್ಧವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಕಾರ್ಯಾನುಮತಿ ಪಡೆದು ಕೆರೆಗಳಲ್ಲಿ ಹೂಳು/ಮಣ್ಣು ಎತ್ತುವಳಿ ಕೈಗೊಳ್ಳುವಂತೆ, ತಪ್ಪಿದಲ್ಲಿ ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ಹಾಗೂ ಸಾಗಾಣಿಕೆಯಲ್ಲಿ ತೊಡಗಿರುವ ವಾಹನಗಳನ್ನು ಜಪ್ತಿ ಮಾಡಿ ದಂಡ ಸಹಿತವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕೆರೆ ಪ್ರಾಧಿಕಾರಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಕಾರ್ಯಪ್ಪ, ಹಿರಿಯ ಭೂ ವಿಜ್ಞಾನಿ ನವೀನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...