Home ರಾಜ್ಯಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು..!

ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು..!

by EDITOR NEWS WARRIORS
0 comments


ಶಿವಮೊಗ್ಗ,  : ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ. 03 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ.

ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಎತರ ಎಸ್ಟಾಬ್ಲಿಷ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಚುನಾವಣೆಯಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ ಹಾಗೂ ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್)ಯನ್ನು ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು.

ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಎಪಿಕ್ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂಕ ದಾಖಲಾತಿಗಳ ಪೈಕಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್ ಇತ್ಯಾದಿಗಳಲ್ಲಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...