Home ಬೆಂಗಳೂರುಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ  ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೇಗೆ ..! ಹೈಕೋರ್ಟ್ ಕಳವಳ..!

ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ  ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೇಗೆ ..! ಹೈಕೋರ್ಟ್ ಕಳವಳ..!

by EDITOR NEWS WARRIORS
0 comments


ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್  ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಾಲಯದ ಕೆಲಸವನ್ನು ನೀವು ಮಾಡಬೇಡಿ :


ಹರೀಶ್ ಪುಂಜಾ ವಿರುದ್ಧ ದಾಖಲಾಗಿದ್ದ 2 FIRಗಳನ್ನು ಪ್ರಶ್ನಿಸಿ  ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು.

ಅದು ಬಿಟ್ಟು ಜನಪ್ರತಿನಿಧಿ ಎಂಬ ಕಾರಣಕ್ಕೆ ‌ಪೋಲಿಸ್ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವುದು ಎಷ್ಟು ಸರಿ ಎಂದು ನ್ಯಾಯಾಲಯ  ಪ್ರಶ್ನಿಸಿದೆ.


ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಮಾಡುವುದಕ್ಕೆ ಬಿಡಿ ಎಂದು ನ್ಯಾಯಾಲಯ ಸಲಹೆ ನೀಡಿದೆ.

ಹಾಗೆಯೇ ಪ್ರಸಕ್ತ ದಿನಗಳಲ್ಲಿ ಪೊಲೀಸ್‌ ರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.


ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿತರ ಪರವಾಗಿ ಆದೇಶಿಸಿರುವ ಭಾರತದ ಯಾವುದೇ ನ್ಯಾಯಾಲಯದಲ್ಲಿ ವಿದೇಶ ನ್ಯಾಯಾಲಯಗಳಲ್ಲಿ ಒಂದೇ ಒಂದು ಆದೇಶ ನೀಡಿರುವ ಉದಾಹರಣೆ ಇದಿಯೇ? ಇದ್ದರೆ ಸಲ್ಲಿಸಿ ಅದರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ನ್ಯಾಯಾಲಯ ಅಭಿಪ್ರಾಯಪಡಿಸಿದೆ.


ವಾದ ಆಲಿಸಿದ ನ್ಯಾಯಾಲಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಮುಂದಿನ ವಿಚಾರಣೆಯವರೆಗೆ ಸಮಾಧಾನವಾಗಿರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ  ವಿಚಾರಣೆ ಮುಂದೂಡಿದೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!