Home ರಾಜ್ಯಅನಧಿಕೃತ ಮನೆಗೆ ಅಧಿಕೃತ ಚರಂಡಿ ವಿದ್ಯುತ್ ಸಂಪರ್ಕ ಒದಗಿಸಿದ ಮಹಾನಗರ ಪಾಲಿಕೆ..!

ಅನಧಿಕೃತ ಮನೆಗೆ ಅಧಿಕೃತ ಚರಂಡಿ ವಿದ್ಯುತ್ ಸಂಪರ್ಕ ಒದಗಿಸಿದ ಮಹಾನಗರ ಪಾಲಿಕೆ..!

by EDITOR NEWS WARRIORS
0 comments


ಶಿವಮೊಗ್ಗ : ನಗರದ ಬೊಮ್ಮನಕಟ್ಟೆಯ ಎಫ್ ಬ್ಲಾಕಿನ ಹಿಂಭಾಗದ ಅಂಚಿನಲ್ಲಿ ಮಹಾನಗರ ಪಾಲಿಕೆಯು ಒಂದಷ್ಟು ಸಿಎ ಸೈಟ್ ಮತ್ತು ಖರಾಬು ಜಾಗವನ್ನು ಬಿಟ್ಟಿದ್ದು ಈಗ ಈ ಪಾಲಿಕೆ ಜಾಗದಲ್ಲಿ ಕಾನೂನು ಬಾಹಿರ ಶೆಡ್ ಗಳು, 30×40 ಅಡಿ ನಿವೇಶನದಲ್ಲಿ ಅನಧಿಕೃತ ಮನೆಗಳು ನಿರ್ಮಾಣವಾಗಿವೆ.

ಈ ಕುರಿತು ಈಗಾಗಲೇ ಪಾಲಿಕೆ ಗಮನಕ್ಕೆ ತಂದರೂ ಇನ್ನೂ ಯಾವ ಕ್ರಮವಾಗಲಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಅನಧೀಕೃತ ಕಟ್ಟಡಕ್ಕೆ ವಿದ್ಯುತ್ ಸಂಪರ್ಕವನ್ನೂ ನೀಡಲಾಗಿದೆ. ಇದು ಹೇಗೆ? ನಿನ್ನೆ ದಿನ ಓರ್ವರು ತಮ್ಮ ಅನಧೀಕೃತ ಮನೆಗೆ ಯುಜಿಡಿ ಸಂಪರ್ಕ ಕಲ್ಪಿಸಲು ಉತ್ತಮ ಗುಣ ಮಟ್ಟದ ಡಾಂಬರ್ ರಸ್ತೆ ಅಗೆದು ಹಾಳುಗೆಡವಿದ್ದಾರೆ.

ಇದರ ಬಗ್ಗೆ ಪಾಲಿಕೆಯ ಇಂಜಿನೀಯರ್ ವಿಷ್ಣು ದೀಕ್ಷಿತರಿಗೆ ತಿಳಿಸಲಾಗಿ ಅವರು ಸ್ಥಳಕ್ಕಾಗಮಿಸಿ ಇದೊಂದು ಮನೆಯವರು ಸಂಪರ್ಕ ಮಾಡಿಕೊಳ್ಳಲಿ. ಬೇರೆಯವರಿಗೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾಗಿ ಸ್ಥಳೀಯರು ಹೇಳುತ್ತಾರೆ. ಪಾಲಿಕೆ ಪರವಾನಿಗೆ ಇದ್ದರೆ ತಮ್ಮದೇನೂ ಅಭ್ಯಂತರ ಇಲ್ಲ. ಆದರೆ ಪರವಾನಿಗೆ ತೋರಿಸಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಪರವಾನಿಗೆ ಇಲ್ಲದ ಜಾಗದಲ್ಲಿ ಕಟ್ಟಿದ ಕಟ್ಟಡಕ್ಕೆ ಕಾನೂನು ಬಾಹಿರವಾಗಿ ಅಧಿಕಾರಿಗಳು ಹೇಗೆ ಸಮ್ಮತಿ ಸೂಚಿಸುತ್ತಾರೆ. ಇದರಲ್ಲಿ ಏನೋ ಗೋಲ್ ಮಾಲ್ ನಡೆದಿದೆ . ಅಧಿಕಾರಿಗಳು, ರಾಜಕೀಯ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಅತಿಕ್ರಮಣದ ಕುರಿತು ಸಮಗ್ರ ತನಿಖೆ ಆಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಮಹಾನಗರ ಪಾಲಿಕೆಯ ನೂತನ ಆಯುಕ್ತರು ಇತ್ತ ಗಮನ ಹರಿಸಬೇಕು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...