Home ಶಿವಮೊಗ್ಗಸೆ.17 ರಂದು ಬೃಹತ್ ಲಸಿಕಾ ಅಭಿಯಾನ ಲಸಿಕಾಕರಣದ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಸೂಚನೆ….

ಸೆ.17 ರಂದು ಬೃಹತ್ ಲಸಿಕಾ ಅಭಿಯಾನ ಲಸಿಕಾಕರಣದ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಸೂಚನೆ….

by EDITOR NEWS WARRIORS


ಸೆಪ್ಟೆಂಬರ್ ಮಾಹೆಯಲ್ಲಿ ಗರಿಷ್ಟ ಕೋವಿಡ್ ಲಸಿಕಾಕರಣ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಯವರು ಸೆಪ್ಟೆಂಬರ್ 17 ರಂದು ರಾಜ್ಯಾದ್ಯಂತ ವಿಶೇಷ ಲಸಿಕಾ ಅಭಿಯಾನಕ್ಕೆ ಕರೆ ಕೊಟ್ಟಿದ್ದು, ಜಿಲ್ಲೆಗೆ 80 ಸಾವಿರ ಲಸಿಕೆ ನೀಡುವ ಗುರಿ ನೀಡಲಾಗಿದೆ. ನಿಗದಿತ ಗುರಿ ತಲುಪಲು ತಾಲ್ಲೂಕುಗಳ ತಹಶೀಲ್ದಾರರು ಎಲ್ಲ ರೀತಿಯ ಅಗತ್ಯ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.


ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಸಭೆ ನಡೆಸಿದ ಅವರು, ಸೆಪ್ಟೆಂಬರ್ 17 ರ ವಿಶೇಷ ಲಸಿಕಾ ಅಭಿಯಾನದಲ್ಲಿ ನಿಗದಿತ ಗುರಿ ತಲುಪಿ ಯಶಸ್ಸು ಸಾಧಿಸಲು ಅಗತ್ಯ ಸಿದ್ದತೆಯನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ತಿಳಿಸಿದರು.


ತಹಶೀಲ್ದಾರರು ಸ್ಥಳೀಯ ನಗರ ಮತ್ತು ಗ್ರಾಮೀಣ ಸಂಸ್ಥೆಗಳ ಸಹಯೋಗದೊಂದಿಗೆ ಲಸಿಕಾಕರಣಕ್ಕೆ ಅಗತ್ಯವಾದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ಡಾಟಾ ಎಂಟ್ರಿ ಆಪರೇಟರ್ ನಿಯೋಜನೆ, ವಾಹನ ವ್ಯವಸ್ಥೆ ಮತ್ತು ಲಸಿಕಾ ಸ್ಥಳ ಗುರುತು ಮಾಡಿ ಸಿದ್ದತೆ ಮಾಡಿಕೊಳ್ಳಬೇಕು. ಅಗತ್ಯ ಸೇವೆಗಳ ಇಲಾಖೆಗಳನ್ನು ಹೊರತುಪಡಿಸಿ ಇತರೆ ಇಲಾಖೆಗಳಿಂದ ಅಗತ್ಯ ಸಿಬ್ಬಂದಿ, ವಾಹನ ವ್ಯವಸ್ಥೆ ಮಾಡಿಕೊಳ್ಳಬೇಕು.


ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಗ್ರಾ.ಪಂ ಮತ್ತು ವಾರ್ಡ್‍ವಾರು ಪಟ್ಟಿಯು ತಾಲ್ಲೂಕು ವೈದ್ಯಾಧಿಕಾರಿಗಳ ಬಳಿ ಇದ್ದು ತಹಶೀಲ್ದಾರರು ಅದನ್ನು ಪಡೆದು ಲಸಿಕಾಕರಣಕ್ಕೆ ಅಗತ್ಯವಾದ ಸಿದ್ದತೆ ಬಗ್ಗೆ ಇಂದೇ ಕ್ರಿಯಾ ಯೋಜನೆ ತಯಾರಿಸಿ ನೀಡಬೇಕು. ಹಾಗೂ ನಾಳೆ ಕ್ಷೇತ್ರ ಭೇಟಿ ನೀಡಿ ಎಲ್ಲ ಸಿದ್ದತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು ಇಂದು ಸಂಜೆ ಪುನಃ ಲಸಿಕಾಕರಣ ಅಭಿಯಾನ ಸಿದ್ದತೆ ಕುರಿತು ಸಭೆ ನಡೆಸುವುದಾಗಿ ತಿಳಿಸಿದರು.
ಸಭೆಯಲ್ಲಿ ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಓ.ಮಲ್ಲಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಇತರರು ಇದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899..

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!