Home ತೀರ್ಥಹಳ್ಳಿತೀರ್ಥಹಳ್ಳಿ ಪೊಲೀಸರಿಂದ ಅಡಿಕೆ ಕಳ್ಳರು ಹಾಗೂ ದೇವಸ್ಥಾನದ ಪೂಜಾ ಸಾಮಗ್ರಿಗಳನ್ನು ಕದ್ದ ಕಳ್ಳರ ಬಂಧನ..!

ತೀರ್ಥಹಳ್ಳಿ ಪೊಲೀಸರಿಂದ ಅಡಿಕೆ ಕಳ್ಳರು ಹಾಗೂ ದೇವಸ್ಥಾನದ ಪೂಜಾ ಸಾಮಗ್ರಿಗಳನ್ನು ಕದ್ದ ಕಳ್ಳರ ಬಂಧನ..!

by EDITOR NEWS WARRIORS
0 comments

ಮಾಲು ಸಹಿತ ಅಡಿಕೆ ಕಳ್ಳರ ಬಂಧನ !

ತೀರ್ಥಹಳ್ಳಿ : ಕಲ್ಕೊಪ್ಪ ಕರಕುಚ್ಚಿ ಗ್ರಾಮದ ದೇವಾದಾಸ್ ಎಂಬುವರ ಮನೆಯಲ್ಲಿ 4 ಕ್ವಿಂಟಾಲ್ ಚಾಲಿ ಅಡಿಕೆ ಕಳ್ಳತನವಾಗಿದ್ದು ಅಡಿಕೆ ಕಳ್ಳತನ ಮಾಡಿದ್ದ ನಾಲ್ವರನ್ನು ವಾಹನ ಹಾಗೂ ಮಾಲು ಸಮೇತ ಮಾಳೂರು ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಮಾಳೂರು ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದವರ ಪ್ರಕರಣವನ್ನು ಬೆನ್ನು ಹತ್ತಿದ ಪೊಲೀಸರ ತಂಡ ಕಳ್ಳರನ್ನು ಭಂದಿಸುವಲ್ಲಿ ಯಶಸ್ವಿಯಾಗಿದ್ದು ಕಳ್ಳರಿಂದ ಅಂದಾಜು 80 ಸಾವಿರ ಮೌಲ್ಯದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ 3 ಲಕ್ಷ ರೂ ವೆಚ್ಚದ ಬೊಲೆರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಶಿಕಾರಿಪುರ ಮೂಲದ
ಹನುಮಂತ, ಅಭಿಷೇಕ್ ಹಾಗೂ ತುಕಾರಾಜ್ ಎಂಬುವರನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಯೂ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಮಾಳೂರು ಸಿಪಿಐ
ಶ್ರೀಧರ್ ರವರ ಮಾರ್ಗದರ್ಶನದಲ್ಲಿ ನಡೆದಿದೆ.

ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

ತೀರ್ಥಹಳ್ಳಿ : ಮಾಳೂರು ವ್ಯಾಪ್ತಿಯ ಆಂಜನೇಯ ದೇವಸ್ಥಾನ ಗಾಳಿಮಾರಮ್ಮ ದೇವಸ್ಥಾನ ಹಾಗೂ ಬಾಳಗಾರು ಸಮೀಪದ ರಾಮೇಶ್ವರ ದೇವಸ್ಥಾನಗಳಲ್ಲಿ ಘಂಟೆ, ಪೂಜಾಸಾಮಾಗ್ರಿಗಳು ಹಾಗೂ ಬೆಳ್ಳಿಯ ದೀಪಗಳನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.ಮಾಳೂರು ಹಾಗೂ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೂಜಾ ಸಾಮಾಗ್ರಿ ಕಳ್ಳತನದ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಬೆನ್ನುಹತ್ತಿದ ಪೊಲೀಸರ ತಂಡ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರಿಂದ ಅಂದಾಜು ಮೌಲ್ಯ 70 ಸಾವಿರ ರೂಪಾಯಿಗಳ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ಎರಡು ಲಕ್ಷ ಮೌಲ್ಯದ ಓಮ್ನಿ ಕಾರನ್ನು ವಶ ಪಡಿಸಿಕೊಂಡಿರುತ್ತಾರೆ. ಆರೋಪಿಗಳಾದ ಭದ್ರಾವತಿ ಮೂಲದ 26 ವರ್ಷದ ಅರುಣ ಹಾಗೂ 24 ವರ್ಷದ ಆಕಾಶ್ ಎಂಬ ಇವರನ್ನ ಬಂಧಿಸಲಾಗಿದೆ.‌ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಸಿಪಿಐ ಶ್ರೀಧರ್ ರವರ ಮಾರ್ಗದರ್ಶನದಲ್ಲಿ ಬಂಧಿಸಲಾಗಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...