Home ಶಿವಮೊಗ್ಗShivamogga breaking :ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿಯನ್ನು ಆ ಸ್ಥಾನದಿಂದ ತೆಗೆದುಹಾಕಿದ ಅಧ್ಯಕ್ಷ ಟಿ ಡಿ ಮೇಘರಾಜ್..!

Shivamogga breaking :ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿಯನ್ನು ಆ ಸ್ಥಾನದಿಂದ ತೆಗೆದುಹಾಕಿದ ಅಧ್ಯಕ್ಷ ಟಿ ಡಿ ಮೇಘರಾಜ್..!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿ ವಿರುದ್ಧ ಮಹಿಳಾ ಒಬ್ಬರು ನಗರದ ಮಹಿಳಾ ಠಾಣೆಯಲ್ಲಿ ತನಗೆ ಮೋಸ ಮಾಡಿ ಸುಳ್ಳು ಹೇಳಿ ವಂಚಿಸಿ ತನ್ನನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊಡೆದು ಕೊಲೆ ಮಾಡುವುದಾಗಿ ಬೆದರಿಸಿ ಮದುವೆಯಾಗುವುದಾಗಿ ನಂಬಿಸಿ ತನ್ನ ಹತ್ತಿರ ಹಣ ತೆಗೆದುಕೊಂಡು ತನ್ನನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ದೂರು ನೀಡಿದ್ದರು.

ದೂರು ನೀಡಿದ ಬೆನ್ನಲ್ಲೇ ಶರತ್ ಕಲ್ಯಾಣಿ ಪರಾರಿಯಾಗಿದ್ದು ಆತನ ಹುಡುಕಾಟದಲ್ಲಿ ಶಿವಮೊಗ್ಗ ಪೊಲೀಸರು ಇದ್ದಾರೆ .

ಈ ಬೆಳವಣಿಗೆಗಳ ಮಧ್ಯೆ ಶಿಸ್ತಿನ ಪಕ್ಷ ಬಿಜೆಪಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಶರತ್ ಕಲ್ಯಾಣಿಯನ್ನು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಸ್ಥಾನದಿಂದ ತೆಗೆದುಹಾಕಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿಡಿ ಮೇಘರಾಜ್ಅವರು ಪತ್ರಿಕೆ ಜೊತೆ ಮಾತನಾಡುತ್ತಾ ಶರತ್ ಕಲ್ಯಾಣಿ ಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಯಾವುದೇ ರೀತಿಯ ನೆರವನ್ನು ಪಕ್ಷ ನೀಡುವುದಿಲ್ಲ ಕಾನೂನಿನ ಚೌಕಟ್ಟಿನಲ್ಲಿ ಆತನ ಮೇಲೆ ದೂರು ದಾಖಲಾಗಿದ್ದು ಆತನನ್ನು ಆ ಸ್ಥಾನದಿಂದ ತೆಗೆದು ಹಾಕಲಾಗಿದೆ.

ಆತನಿಗೂ ಪಕ್ಷಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ಮಹಿಳೆಯರ ಬಗ್ಗೆ ಬಿಜೆಪಿ ಪಕ್ಷಕ್ಕೆ ವಿಶೇಷವಾದ ಗೌರವವಿದೆ ಆಸ್ಥಾನದಲ್ಲಿದ್ದ ಶರತ್ ಕಲ್ಯಾಣಿ ಸರಿಯಾಗಿ ನಡೆದುಕೊಳ್ಳಬೇಕಿತ್ತು ಒಂದು ವೇಳೆ ಆತ ತಪ್ಪಿಸಸ್ಥ ಎಂದು ಸಾಬೀತಾದರೆ ಪಕ್ಷ ಎಂದಿಗೂ ಆತನನ್ನು ಕ್ಷಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಹಾಗೆ ಮುಂದುವರೆದು ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದ್ದಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!