Home ಬೆಂಗಳೂರುವಿಶ್ವಕರ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಯವರಿಗೆ ಪರಿಚಯಿಸಿ ಡಾ.ಉಮೇಶ್ ಕುಮಾರ್ ಬೆಂಗಳೂರು..!

ವಿಶ್ವಕರ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಯವರಿಗೆ ಪರಿಚಯಿಸಿ ಡಾ.ಉಮೇಶ್ ಕುಮಾರ್ ಬೆಂಗಳೂರು..!

by EDITOR NEWS WARRIORS

ವಿಶ್ವಕರ್ಮ ಸಂಸ್ಕೃತಿ ಪರಂಪರೆಯು ಜಗತ್ತಿನ ಅತಿ ಶ್ರೀಮಂತ ಸಂಸ್ಕೃತಿಗಳಲ್ಲಿ ಒಂದಾಗಿದ್ದು, ಅದನ್ನು ಮುಂದಿನ ಪೀಳಿಗೆಯವರಿಗೆ ಸೂಕ್ತ ರೀತಿಯಲ್ಲಿ ಪರಿಚಯಿಸುವ ಅಗತ್ಯವಿದೆ ಎಂದು ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯಾಧ್ಯಕ್ಷರಾದ ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ಕರೆಕೊಟ್ಟರು.

ಬೆಂಗಳೂರಿನ ಎಚ್. ಎ. ಎಲ್. ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಮಾಜದವರು ಆಯೋಜಿಸಿದ್ದ “ವಿಶ್ವಕರ್ಮ ಪೂಜ್ಯೋತ್ಸವ” ಸಮಾರಂಭವನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಉಮೇಶ್ ಕುಮಾರ್ ಅವರುವ “ವಿಶ್ವಕರ್ಮ ಸಮಾಜದಲ್ಲಿ ಜನಿಸಿರುವುದಕ್ಕೆ ನಾವೆಲ್ಲ ಬಹಳ ಹೆಮ್ಮೆ ಪಡಬೇಕು. ಏಕೆಂದರೆ ನಮ್ಮಷ್ಟು ಕೌಶಲ್ಯ ಹೊಂದಿದ ಇನ್ನೊಂದು ಸಮುದಾಯವಿಲ್ಲ. ಹಾಗೆಯೇ ನಮ್ಮಷ್ಟು ಶ್ರಮ ಪಡುವ ಇನ್ನೊಂದು ಸಮುದಾಯವೂ ಇಲ್ಲ. ಇತರ ಎಲ್ಲ ಸಮುದಾಯಗಳಿಗಿಂತ ಹೆಚ್ಚಿನ ಕೌಶಲ್ಯವನ್ನು, ಪಂಚ ಕಸುಬುಗಳ ಮೂಲಕ ಭಗವಾನ್ ವಿಶ್ವಕರ್ಮ ದೇವರು ನಮಗೆ ದಯಪಾಲಿಸಿದ್ದಾರೆ. ಆದರೆ ಇಂದಿನ ಆಧುನಿಕ ಜಗತ್ತಿನಲ್ಲಿ ಯುವ ಪೀಳಿಗೆ ಹಾಗೂ ಮಕ್ಕಳಿಗೆ ನಮ್ಮ ಸಂಸ್ಕೃತಿ ಬಗ್ಗೆ ಅರಿವು ಕಡಿಮೆಯಾಗುತ್ತಿದೆ. ಅವರಲ್ಲಿ ಸಂಸ್ಕೃತಿ-ಪರಂಪರೆಯ ಅರಿವನ್ನು ಹೆಚ್ಚು ಮಾಡಿ, ಅವರೂ ಸಹ ತಮ್ಮ ಸಮುದಾಯದ ಬಗ್ಗೆ ಹೆಮ್ಮೆ ಪಡುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಲಲಿತೇಶ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಉಪಾಧ್ಯಕ್ಷ ಪ್ರಸನ್ನ, ನರಸಿಂಹ ಖಜಾಂಚಿ ನಂಜುಂಡಸ್ವಾಮಿ ಮುಖಂಡರಾದ ಶಂಕರ್.ಜಿ ಹಾಗೂ ವಿಶೇಷ ಸಂಖ್ಯೆಯಲ್ಲಿ ಬಾಂಧವರು ಉಪಸ್ಥಿತರಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!