Home ಬೆಂಗಳೂರುBig breaking news: ನಟ ದರ್ಶನ್ ಗೆ ಬಿಡುಗಡೆಯ ಭಾಗ್ಯ..!

Big breaking news: ನಟ ದರ್ಶನ್ ಗೆ ಬಿಡುಗಡೆಯ ಭಾಗ್ಯ..!

by EDITOR NEWS WARRIORS

ತೀವ್ರ ಕಾತುರದಿಂದ ಕಾಯುತ್ತಿದ್ದ ನಟ ದರ್ಶನ್ ಅಭಿಮಾನಿಗಳಿಗೆ ಹಾಗೂ ಕುಟುಂಬದವರಿಗೆ ಶುಭ ಸುದ್ದಿ ಒಂದು ಸಿಕ್ಕಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಜಾಮೀನು ಮಂಜುರಾಗಿದೆ.

ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠದಲ್ಲಿ ಮಂಗಳವಾರ ನಟ ದರ್ಶನ್ ಸಲ್ಲಿಸಿದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿತ್ತು ತೀರ್ಪನ್ನು ಇಂದಿಗೆ ಕಾಯ್ದಿರಿಸಲಾಗಿತ್ತು.


ನಟ ದರ್ಶನ್ ಪರ ಖ್ಯಾತ ವಕೀಲರಾದ ಸಿ.ವಿ ನಾಗೇಶ್ ಪ್ರಬಲವಾದ ವಾದ ಮಂಡಿಸಿದ್ದರು. ದರ್ಶನ್ ಗೆ ಇರುವ ಬೆನ್ನು ನೋವಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಕೀಲರು ವಾದ ಮಂಡಿಸಿದ್ದರು.

ಡಿಕೆ ಶಿವಕುಮಾರ್ ಪ್ರಕರಣವನ್ನು ಎಳೆದು ತಂದ ಸಿವಿ ನಾಗೇಶ್..?!

ಇಂದಿನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಕರಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ಜಾಮೀನು ಮಂಜೂರು ಮಾಡಿದ್ದನ್ನು ಉಲ್ಲಂಘಿಸಿ ವಾದ ಮಂಡಿಸಿದರು. ಡಿಕೆ ಶಿವಕುಮಾರ್ ಅವರಿಗಿದ್ದ ಆರೋಗ್ಯ ಸಮಸ್ಯೆಗಿಂತ ಇದು ಬಹಳ ಗಂಭೀರವಾಗಿದ್ದು. ಬೆನ್ನು ಹುರಿಯ ಸಮಸ್ಯೆಯಿಂದ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೆ ಆದರೆ ಮುಂದೊಂದು ದಿನ ಬಹಳ ದೊಡ್ಡ ಸಮಸ್ಯೆಗೆ ಕಾರಣ ಆಗುತ್ತದೆ. ಡಿಸ್ಕ್ ನಲ್ಲಿ ಆದ ಸಮಸ್ಯೆಯಿಂದ ರಕ್ತ ಪರಿಚಲನೆ ಆಗುತ್ತಿಲ್ಲ. ಇದು ನಾರ್ಮಲ್ ಟ್ರೀಟ್ ಮೆಂಟ್ ಆಗಲ್ಲ, ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಆದ್ದರಿಂದ ಇದನ್ನು ಪರಿಗಣಿಸಿ ದರ್ಶನ್ ಗೆ ಜಾಮೀನು ನೀಡಬೇಕು ಎಂದು ಡಿಕೆ ಶಿವಕುಮಾರ್ ಪ್ರಕರಣವನ್ನು ಮುಂದಿಟ್ಟುಕೊಂಡು ವಾದ ಮಂಡಿಸಿದರು.

ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ದರ್ಶನ್ ಒಬ್ಬ ವಿಚಾರಣಾಧೀನ ಕೈದಿ‌ ಆತನಿಗೂ ಉತ್ತಮ ಆರೋಗ್ಯದ ಹಕ್ಕಿದೆ . ಚಿಕಿತ್ಸೆ ಪಡೆಯುವುದು ವ್ಯಕ್ತಿಯ ಮೂಲಭೂತ ಹಕ್ಕು ಎಂದು. ನೀವು ಎಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತೀರಾ ಎಂದು ನ್ಯಾಯಾಧೀಶರು ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್ ‘ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಪ್ರಸ್ತುತ ಬಳ್ಳಾರಿ ಜೈಲ್ ನಲ್ಲಿ ಇರುವ ದರ್ಶನ್ ಗೆ ಜಾಮೀನು ಮಂಜೂರಾಗಿದ್ದು ಈಗ ಮೈಸೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!