Home ರಾಜ್ಯಶಿವಮೊಗ್ಗಕ್ಕೆ ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಕೆ ಎನ್ ಪಣೀಂದ್ರ ಮಹತ್ವದ ಬೇಟಿ..!

ಶಿವಮೊಗ್ಗಕ್ಕೆ ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಕೆ ಎನ್ ಪಣೀಂದ್ರ ಮಹತ್ವದ ಬೇಟಿ..!

by EDITOR NEWS WARRIORS


ಕರ್ನಾಟಕ ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ .ಕೆ.ಎನ್.ಫಣೀಂದ್ರ ಅವರು ಮಾರ್ಚ್18ರಿಂದ 21ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು.


ಮಾರ್ಚ್18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾರ್ಚ್19ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಅಂದು ಸಂಜೆ 5.30ರಿಂದ 6.30ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶಿಕ್ಷಣ ಇಲಾಖೆ, ರೇಷ್ಮೇ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗಾಗಿ ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳಿಗಾಗಿ ಏರ್ಪಡಿಸಲಾಗುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.


ಮಾರ್ಚ್20ರಂದು ಬೆಳಿಗ್ಗೆ 9.45 ರಿಂದ 10.45ರವರೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನಕ್ಕೆ ಭೇಟಿ ನೀಡಿ, ಹಿರಿಯ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳೊಂದಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಮತ್ತು ಆಡಳಿತ ನೀಡುವಲ್ಲಿ ವಕೀಲರ ಪಾತ್ರ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುವರು.

ಬೆಳಿಗ್ಗೆ 11ರಿಂದ 11.30ರವರೆಗೆ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಪ್ರತಿವಾದಿಗಳನ್ನು ಉದ್ದೇಶಿಸಿ ಮಾತನಾಡುವರು. ಅಲ್ಲದೇ ಸಾರ್ವಜನಿಕರು ಸಲ್ಲಿಸಿದ ದೂರುಗಳು ಮತ್ತು ಕುಂದು-ಕೊರತೆಗಳ ಪರಿಹಾರಕ್ಕಾಗಿ ಅಗತ್ಯ ಕ್ರಮಕೈಗೊಳ್ಳುವರು.


ಮಾರ್ಚ್21ರಂದು ಬೆಳಿಗ್ಗೆ 9ರಿಂದ 10ರವರೆಗೆ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಪೊಲೀಸ್ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಜಿಲ್ಲೆಯ ಶಿವಮೊಗ್ಗ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿನ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವರು. ಅಂದು ಸಂಜೆ 6 ರಿಂದ 7ರವರೆಗೆ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಮತ್ತು ಕಾನೂನು ಸೇವಾ ಪ್ರಾಧಿಕಾರಗಳ ಪಾತ್ರ ಎಂಬ ವಿಷಯದ ಕುರಿತು ನ್ಯಾಯಾಧೀಶರೊಂದಿಗೆ ಸಂವಾದ ನಡೆಸುವರು.


ರಾತ್ರಿ 11ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹಿಂದಿರುಗುವರು.ಜಿಲ್ಲೆಯ ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಮಾರ್ಚ್18-21ರವರೆಗೆ ಕರ್ನಾಟಕ ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ .ಕೆ.ಎನ್.ಫಣೀಂದ್ರರವರ ಭೇಟಿ ಮಹತ್ವ ಪಡೆದುಕೊಂಡಿದೆ….

ರಘುರಾಜ್ ಹೆಚ್.ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!