Home ಶಿವಮೊಗ್ಗಆರೋಗ್ಯಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವಂತಿಲ್ಲ ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ..!

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವಂತಿಲ್ಲ ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ..!

by EDITOR NEWS WARRIORS
0 comments

ಬೆಂಗಳೂರು:ವಿಧಾನಪರಿಷತ್‍ನಲ್ಲಿ ಇಂದು ಕಾಂಗ್ರೆಸ್ ನ್ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬರುತ್ತಿದೆ.ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದ್ದು.

ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು.

ಸಮಯ ದುರ್ಬಳಕೆ ತಡೆಗಟ್ಟಲು ಕ್ರಮ:

ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು 1 ಗಂಟೆ ಮುಂಚಿತವಾಗಿ ಹೋಗುವುದು ಇಲ್ಲವೇ 1 ಗಂಟೆ ತಡವಾಗಿ ಬರುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ. ಈ ವ್ಯವಸ್ಥೆಯನ್ನು ದುರ್ಬಳಕೆ ಮಾಡುತ್ತಿದ್ದು, ಇದನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸಮರ್ಥನೆ ಮಾಡಿಕೊಂಡರು.

ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮದ ಎಚ್ಚರಿಕೆ :

ಈಗಾಗಲೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಅಧಿಸೂಚನೆ ಮೂಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಉಲ್ಲಂಘನೆ ಮಾಡಿರುವುದು ಕಂಡುಬಂದರೆ ಶಿಸ್ತುಕ್ರಮ ಜರುಗಿಸುವುದಾಗಿ ಸಚಿವರು ಎಚ್ಚರಿಸಿದರು.

ಇನ್ನು ಮುಂದೆ ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾದ ವೇಳೆ ನಾಲ್ಕು ಬಾರಿ ಬಯೋಮೆಟ್ರಿಕ್‍ಗೆ ತಮ್ಮ ಹಸ್ತಮುದ್ರೆ ಹಾಕಬೇಕು. ಬೆಳಗ್ಗೆ 9 ಗಂಟೆ, ಮಧ್ಯಾಹ್ನ 2, 3 ಮತ್ತು 4 ಗಂಟೆಗೆ ಕಡ್ಡಾಯವಾಗಿ ಹಾಕಲೇಬೇಕು. ಇದರ ಆಧಾರಿತವಾಗಿಯೇ ಸಂಬಳವನ್ನು ನೀಡಲಾಗುವುದು. ಈ ಕುರಿತು ಮುಖ್ಯಸ್ಥರ ಜೊತೆಯೂ ಚರ್ಚೆ ಮಾಡಲಾಗಿದೆ. ರೋಗಿಗಳಿಗೆ ಸಕಾಲಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಸಚಿವರು ಹೇಳಿದರು.

ಜಿಲ್ಲಾಸ್ಪತ್ರೆಗಳಲ್ಲಿ ಡಿಎಚ್‍ಒ, ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಕರ್ತವ್ಯ ನಿರ್ವಹಿಸುತ್ತಾರೆ. ನಾವು ಎನ್‍ಎಂಸಿ ಜಾರಿಗೆ ತಂದಿರುವ ಮಾರ್ಗಸೂಚಿಗಳ ಮೂಲಕವೇ ಕಾರ್ಯ ನಿರ್ವಹಿಸುವಂತೆ ಸೂಚನೆ ಕೊಡಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಸರಿಪಡಿಸಲಾಗುವುದು ಎಂದು ಸಚಿವರು ಆಶ್ವಾಸನೆ ನೀಡಿದರು.

ಪ್ರತಿಯೊಂದು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಒಪಿಡಿ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿದೆ. ಅಗತ್ಯವಿರುವ ರೋಗಿಗಳಿಗೆ ಒಪಿಡಿ ನೀಡಬೇಕೆಂದು ಸೂಚನೆ ಕೊಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಉತ್ತಮವಾದ ವೈದ್ಯಕೀಯ ಸೌಲಭ್ಯ ಸಿಗುತ್ತಿದೆ. ಎಲ್ಲಿಯೂ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಶಿವಮೊಗ್ಗ ಮೇಗನ್ ಗೆ ಖುದ್ದು ಬೇಟಿ :

ಶಿವಮೊಗ್ಗ ಜಿಲ್ಲೆಯ ಮೆಗಾನ್ ಆಸ್ಪತ್ರೆಯಲ್ಲಿ ಕೆಲವು ಸಣ್ಣಪುಟ್ಟ ಸಮಸ್ಯೆಗಳನ್ನು ಸದಸ್ಯರು ನನ್ನ ಗಮನಕ್ಕೆ ತಂದಿದ್ದಾರೆ. ಖುದ್ದು ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸುತ್ತೇನೆ ಎಂದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...