Home ಬೆಂಗಳೂರುಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ ಸಚಿವ ಮಧು ಬಂಗಾರಪ್ಪ..!

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ ಸಚಿವ ಮಧು ಬಂಗಾರಪ್ಪ..!

by EDITOR NEWS WARRIORS
0 comments

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ವಿಕಾಸಸೌಧದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಅಲ್ಲಿನ “*ಶೈಕ್ಷಣಿಕ ಅಭಿವೃದ್ಧಿ ವಿಷಯಗಳ ಕುರಿತು*” ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರೊಂದಿಗೆ ತಮ್ಮ ಕ್ಷೇತ್ರದಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಷಯಗಳ ಕುರಿತು ದೀರ್ಘಕಾಲ ಚರ್ಚಿಸಲಾಯಿತು. ಅಲ್ಲಿನ ಪ್ರಮುಖ ಬೇಡಿಕೆಗಳಾದ ಶಿಕ್ಷಕರ ಕೊರತೆ ನೀಗಿಸುವುದು, ನೂತನ ಶಾಲಾ ಕೊಠಡಿಗಳ ಮಂಜೂರು, ಶಿಕ್ಷಕರಿಗೆ ತರಬೇತಿ, ಶೌಚಾಲಯ ಸ್ಥಾಪನೆ, ಕೊಠಡಿ ದುರಸ್ತಿ, ನೂತನ ಕೆ.ಪಿ.ಎಸ್ ಶಾಲೆಗಳನ್ನು ಮಂಜೂರು, ನೂತನ ತಾಲೂಕುಗಳಿಗೆ ಬಿ.ಇ.ಒ ಕಚೇರಿಗಳನ್ನು ಆರಂಭಿಸುವುದು ಹಾಗೂ ಮಕ್ಕಳ ಹಾಜರಾತಿ ಹೆಚ್ಚಳ ಸೇರಿದಂತೆ ಇನ್ನೂ ಅನೇಕ ವಿಚಾರಗಳ ಕುರಿತು ಮಾಹಿತಿ ಪಡೆಯಲಾಯಿತು.

ಶೀಘ್ರವೇ ಆಗಬೇಕಿರುವ ಎಲ್ಲಾ ಕಾರ್ಯಗಳ ಬಗ್ಗೆ ಕೂಡಲೇ ಗಮನಹರಿಸಂತೆ ಅಧಿಕಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದರು.ಈಗಾಗಲೇ ನಮ್ಮ ಸರ್ಕಾರವು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿವಹಿಸಿದೆ. ಜೊತೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆಗಮಿಸಿ, ಅಲ್ಲಿನ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನೊಳಗೊಂಡ ಸಭೆ ನಡೆಸಿಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಸಚಿವ ಸಂಪುಟ ಸದಸ್ಯರಾದ ಡಾ. ಶರಣ ಪ್ರಕಾಶ್ ಪಾಟೀಲ್, ರಹೀಂಖಾನ್, ಶರಣಬಸಪ್ಪಗೌಡ ದರ್ಶನಾಪುರ, ಕೆ.ಕೆ.ಆರ್‌.ಡಿ.ಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಆಯುಕ್ತರಾದ ತ್ರಿಲೋಕ ಚಂದ್ರ ಸೇರಿದಂತೆ ಈ ಭಾಗದ ಶಾಸಕರುಗಳು ಹಾಗೂ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...