Home ಶಿವಮೊಗ್ಗಆರೋಗ್ಯತೀರ್ಥಹಳ್ಳಿ: ಮಂಗನ ಕಾಯಿಲೆಗೆ ಮಗು ಬಲಿ..! ತನಿಖೆಗೆ ಡಿಸಿ ಸೂಚನೆ..!

ತೀರ್ಥಹಳ್ಳಿ: ಮಂಗನ ಕಾಯಿಲೆಗೆ ಮಗು ಬಲಿ..! ತನಿಖೆಗೆ ಡಿಸಿ ಸೂಚನೆ..!

by EDITOR NEWS WARRIORS
0 comments



ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ದತ್ತರಾಜಾಪುರ ಗ್ರಾಮದ 8 ವರ್ಷದ ಬಾಲಕ ರಚಿತ್ ಕೆ ಎಫ್ ಡಿ ಕಾಯಿಲೆಯಿಂದ ನಿನ್ನೆ ದಿ.17-04-2025 ರಂದು ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.


ಏಪ್ರಿಲ್ 4ನೇ ತಾರೀಕು ರಚಿತ್ ರವರ ಅಕ್ಕ ರಮ್ಯಾ ಇವರಿಗೆ ಜ್ವರ ಇದ್ದ ಪ್ರಯುಕ್ತ ಜೆಸಿ ಆಸ್ಪತ್ರೆ ತೀರ್ಥಹಳ್ಳಿ ಯಲ್ಲಿ ದಾಖಲಾಗಿ ಕೆಎಫ್ ಡಿ ಪರೀಕ್ಷೆ ಮಾಡಿಸಿದಾಗ ಕೆಎಫ್ ಡಿ ಪಾಸಿಟಿವ್ ಬಂದಿರುತ್ತದೆ. ಹಾಗೂ ರಚಿತ್ ಗೆ ಏಪ್ರಿಲ್ 5ನೇ ತಾರೀಕು ಸುಸ್ತು ಮತ್ತು ವಾಂತಿ ಇದ್ದ ಪ್ರಯುಕ್ತ ಜೆಸಿ ಆಸ್ಪತ್ರೆಗೆ ದಾಖಲಾಗಿ ಕೆಎಫ್ ಡಿ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದ್ದು ರಮ್ಯಾ ಮತ್ತು ರಚಿತ್ ಇಬ್ಬರಿಗೂ 6ನೇ ತಾರೀಕು ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿ ಎಬಿಎಆರ್ ಕೆ ಅಡಿ ಉಚಿತ ಚಿಕಿತ್ಸೆ ನೀಡಲಾಗಿದ್ದು ರಮ್ಯಾ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿರುತ್ತಾರೆ.


ರಚಿತ್ ಆರೋಗ್ಯ ಚೇತರಿಸದೇ ಇದ್ದುದರಿಂದ ಆಸ್ಪತ್ರೆಯಲ್ಲಿಯೇ ಇರಿಸಿ ತೀವ್ರ ನಿಘಾ ಘಟಕ ದಲ್ಲಿರಿಸಿ ಚಿಕಿತ್ಸೆ ನೀಡಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ರಚಿತ್ ಮರಣ ಹೊಂದಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿರುತ್ತಾರೆ


ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನವರು ಈ ಹಿಂದೆ ಜಿಲ್ಲಾಧಿಕಾರಿಗಳ ಕಛೇರಿ ಯಲ್ಲಿ ಸಭೆ ನಡೆಸಿ ಕೆಎಫ್ ಡಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿರುತ್ತಾರೆ. ಹಾಗೂ ರಚಿತ್ ಚಿಕಿತ್ಸೆ ಕುರಿತು ಮಣಿಪಾಲ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದರು.


ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಯಲ್ಲಿ ಅಧಿಕಾರಿಗಳ ಸಭೆ ಕರೆದು ಕೆಎಫ್ ಡಿ ನಿಯಂತ್ರಣದ ಕುರಿತು ಸಲಹೆ ನೀಡಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಸೂಚನೆ ನೀಡಿರುತ್ತಾರೆ ಹಾಗೂ ರಚಿತ್ ಚಿಕಿತ್ಸೆ ಕುರಿತು ಮಣಿಪಾಲ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಉತ್ತಮ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದರು. ಇದರ ಹೊರತಾಗಿಯೂ ರಚಿತ್ ಸಾವು ಎಲ್ಲರಿಗೂ ತುಂಬಾ ನೋವನ್ನುಂಟು ಮಾಡಿದೆ .


ಈ ಮರಣ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...