Home ಶಿವಮೊಗ್ಗಕುವೆಂಪು ನಗರ ಬಡಾವಣೆಗೆ ಶಾಸಕ ಚೆನ್ನಬಸಪ್ಪ ಭೇಟಿ..!

ಕುವೆಂಪು ನಗರ ಬಡಾವಣೆಗೆ ಶಾಸಕ ಚೆನ್ನಬಸಪ್ಪ ಭೇಟಿ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕುವೆಂಪು ನಗರ ಬಡಾವಣೆಗೆ ನಗರ ಶಾಸಕರಾದ ಚೆನ್ನಬಸಪ್ಪ ಚೆನ್ನಿ ಭೇಟಿ ನೀಡಿ ಮುಂಬರುವ ಮಳೆಗಾಲಕ್ಕೆ ಆಗುವ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಸಂಭವಿಸುವ ನೆರೆ ಹಾಗೂ ಕೆರೆಯ ಹೆಚ್ಚುವರಿ ನೀರು ಬಡಾವಣೆಗೆ ಹರಿದು ಬರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಪರಿಶೀಲನೆ ನಡೆಸಿದರು.

ಈ ಸಮಸ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ವಿವಿಧ ತಾಂತ್ರಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ಸಮಾಲೋಚನೆಯನ್ನು ನಡೆಸಿ, ನಗರದ ಎಲ್ಲಾ ಭಾಗಗಳಲ್ಲಿ ಮಳೆಗಾಲದ ಮುನ್ನ ಜಾಗೃತಿ ಕ್ರಮಗಳನ್ನು ಶಿಸ್ತಿನಿಂದ ಅನುಷ್ಠಾನಗೊಳಿಸುವ ಮೂಲಕ, ನಾಗರಿಕರಿಗೆ ತೊಂದರೆ ಉಂಟಾಗದಂತೆ ಪಾಲಿಕೆ ಬದ್ಧವಾಗಿ ಇರಬೇಕೆಂದು ತಿಳಿಸಿದರು.

ಶಾಸಕರ ಭೇಟಿಯ ವೇಳೆ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದು ತಮಗಾಗುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳಾದ ಲಕ್ಷ್ಮಿ ,ತ್ರಿವೇಣಿ, ಉಪಸ್ಥಿತರಿದ್ದು ಶೀಘ್ರದಲ್ಲಿ ಬಡಾವಣೆಯ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಶಾಸಕರಿಗೆ ತಿಳಿಸಿದರು.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!