Home ಶಿವಮೊಗ್ಗಆರೋಗ್ಯತೀರ್ಥಹಳ್ಳಿ :ಮುಂಜಾಗರೂಕತೆಯಿಂದ ಸಾಂಕ್ರಾಮಿಕ ರೋಗಗಳ ಪರಿಣಾಮಕಾರಿ ನಿಯಂತ್ರಣ ಸಾಧ್ಯ : ಜೆ ಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರಕಾಶ್ ಕೆ ಎಸ್..!

ತೀರ್ಥಹಳ್ಳಿ :ಮುಂಜಾಗರೂಕತೆಯಿಂದ ಸಾಂಕ್ರಾಮಿಕ ರೋಗಗಳ ಪರಿಣಾಮಕಾರಿ ನಿಯಂತ್ರಣ ಸಾಧ್ಯ : ಜೆ ಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರಕಾಶ್ ಕೆ ಎಸ್..!

by EDITOR NEWS WARRIORS

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಶ್ರೀ ಜೆ ಸಿ ಆಸ್ಪತ್ರೆಯಲ್ಲಿ
ತೀರ್ಥಹಳ್ಳಿ ತಾಲ್ಲೂಕು ವ್ಯಾಪ್ತಿಯ ವಿವಿಧ ಹಾಸ್ಟೆಲ್ ಗಳ ವಾರ್ಡನ್ ಮತ್ತು ಸಿಬ್ಬಂದಿಗಳಿಗೆ ಕೀಟ ಜನ್ಯ ರೋಗಗಳ ನಿಯಂತ್ರಣ ಕ್ರಮಗಳ ಬಗ್ಗೆ ಅರಿವು ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ ಟಿ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಾಗಾರದ ಉದ್ದೇಶಗಳ ಬಗ್ಗೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿದ್ದ ಜಿಲ್ಲಾ ಎನ್ ವಿ ಬಿ ಡಿ ಸಿ ಪಿ ಕಚೇರಿಯ ಪ್ರಭಾರ ಮೇಲ್ವಿಚಾರಕ ನಾರಾಯಣ್ ಮಾತನಾಡಿ, ಕೀಟಜನ್ಯ ರೋಗಗಳ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳು ನಿಯಂತ್ರಣ ಕ್ರಮಗಳು, ರೋಗ ಲಕ್ಷಣಗಳು ಮತ್ತು‌  ಚಿಕಿತ್ಸೆಗಳ ಬಗ್ಗೆ ವಿವರವಾಗಿ ತಿಳಿಸಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳು ಸಾಂಕ್ರಾಮಿಕ ರೋಗ‌ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಮೂಲಕ ಅಗತ್ಯ ಸಹಕಾರ ನೀಡುವಂತೆ ಕೋರಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶ್ರೀ ಜೆ ಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪ್ರಕಾಶ್ ಕೆ ಎಸ್ ಮಾತನಾಡಿ, ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ತಡೆಗಟ್ಟುವುದೇ ಮುಖ್ಯ. ಅಗತ್ಯ ಮುಂಜಾಗರೂಕತೆ ವಹಿಸುವುದರಿಂದ‌ ಸಾಂಕ್ರಾಮಿಕ ರೋಗಗಳ ಪರಿಣಾಮಕಾರಿ ನಿಯಂತ್ರಣ ಸಾಧ್ಯ. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂಜಾಗರೂಕತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ರೋಗಿಗಳಿಗೆ ಆರೋಗ್ಯ ಇಲಾಖೆಯಿಂದ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದೆ. ರೋಗ ನಿಯಂತ್ರಣಕ್ಕೆ ಇಲಾಖೆಯೊಂದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಆ ನಿಟ್ಟಿನಲ್ಲಿ ತಮ್ಮೆಲ್ಲರ ಸಹಕಾರ ಇರಲಿ ಎಂದರು.
ಜಿಲ್ಲಾ ಎನ್ ವಿ ಬಿ ಡಿ ಸಿ ಪಿ ಕಚೇರಿಯ ಹಿರಿಯ ಆರೊಗ್ಯ ನಿರೀಕ್ಷಣಾಧಿಕಾರಿ ರಾಜು, ಆರೊಗ್ಯ ನಿರೀಕ್ಷಣಾಧಿಕಾರಿ ಧೀರೇಂದ್ರ ಸೇರಿದಂತೆ  ತಾಲ್ಲೂಕಿನ ವಿವಿಧ ಹಾಸ್ಟೇಲ್, ವಸತಿ ಶಾಲೆಗಳ ವಾರ್ಡನ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅರೋಗ್ಯ ನಿರೀಕ್ಷಣಾಧಿಕಾರಿ ಹನುಮಂತ ರೆಡ್ಡಿ ಸ್ವಾಗತಿಸಿ, ಸಂಜನಾ ವಂದಿಸಿದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!