
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಶ್ರೀ ಜೆ ಸಿ ಆಸ್ಪತ್ರೆಯಲ್ಲಿ
ತೀರ್ಥಹಳ್ಳಿ ತಾಲ್ಲೂಕು ವ್ಯಾಪ್ತಿಯ ವಿವಿಧ ಹಾಸ್ಟೆಲ್ ಗಳ ವಾರ್ಡನ್ ಮತ್ತು ಸಿಬ್ಬಂದಿಗಳಿಗೆ ಕೀಟ ಜನ್ಯ ರೋಗಗಳ ನಿಯಂತ್ರಣ ಕ್ರಮಗಳ ಬಗ್ಗೆ ಅರಿವು ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ ಟಿ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಾಗಾರದ ಉದ್ದೇಶಗಳ ಬಗ್ಗೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿದ್ದ ಜಿಲ್ಲಾ ಎನ್ ವಿ ಬಿ ಡಿ ಸಿ ಪಿ ಕಚೇರಿಯ ಪ್ರಭಾರ ಮೇಲ್ವಿಚಾರಕ ನಾರಾಯಣ್ ಮಾತನಾಡಿ, ಕೀಟಜನ್ಯ ರೋಗಗಳ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳು ನಿಯಂತ್ರಣ ಕ್ರಮಗಳು, ರೋಗ ಲಕ್ಷಣಗಳು ಮತ್ತು ಚಿಕಿತ್ಸೆಗಳ ಬಗ್ಗೆ ವಿವರವಾಗಿ ತಿಳಿಸಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳು ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಮೂಲಕ ಅಗತ್ಯ ಸಹಕಾರ ನೀಡುವಂತೆ ಕೋರಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶ್ರೀ ಜೆ ಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪ್ರಕಾಶ್ ಕೆ ಎಸ್ ಮಾತನಾಡಿ, ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ತಡೆಗಟ್ಟುವುದೇ ಮುಖ್ಯ. ಅಗತ್ಯ ಮುಂಜಾಗರೂಕತೆ ವಹಿಸುವುದರಿಂದ ಸಾಂಕ್ರಾಮಿಕ ರೋಗಗಳ ಪರಿಣಾಮಕಾರಿ ನಿಯಂತ್ರಣ ಸಾಧ್ಯ. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂಜಾಗರೂಕತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ರೋಗಿಗಳಿಗೆ ಆರೋಗ್ಯ ಇಲಾಖೆಯಿಂದ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದೆ. ರೋಗ ನಿಯಂತ್ರಣಕ್ಕೆ ಇಲಾಖೆಯೊಂದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಆ ನಿಟ್ಟಿನಲ್ಲಿ ತಮ್ಮೆಲ್ಲರ ಸಹಕಾರ ಇರಲಿ ಎಂದರು.
ಜಿಲ್ಲಾ ಎನ್ ವಿ ಬಿ ಡಿ ಸಿ ಪಿ ಕಚೇರಿಯ ಹಿರಿಯ ಆರೊಗ್ಯ ನಿರೀಕ್ಷಣಾಧಿಕಾರಿ ರಾಜು, ಆರೊಗ್ಯ ನಿರೀಕ್ಷಣಾಧಿಕಾರಿ ಧೀರೇಂದ್ರ ಸೇರಿದಂತೆ ತಾಲ್ಲೂಕಿನ ವಿವಿಧ ಹಾಸ್ಟೇಲ್, ವಸತಿ ಶಾಲೆಗಳ ವಾರ್ಡನ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅರೋಗ್ಯ ನಿರೀಕ್ಷಣಾಧಿಕಾರಿ ಹನುಮಂತ ರೆಡ್ಡಿ ಸ್ವಾಗತಿಸಿ, ಸಂಜನಾ ವಂದಿಸಿದರು.